
ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಂತಾವರ ಗ್ರಾಮದ ಬಾರಾಡಿ ಕ್ರಾಸ್ ಎಂಬಲ್ಲಿ ಪೊಲೀಸ್ ಇಲಾಖೆಯ ಉಪಯೋಗಕ್ಕಾಗಿ ಶ್ರೀ ವಿನಿಶ್ (ರಶ್ವಿ ಕನ್ಸ್ಟ್ರಷನ್ ಮಾಲಕರು, ಕಾರ್ಕಳ ) ಇವರು ತನ್ನ ಮಾವ ದಿ. ಶ್ರೀ ಡಿ.ಆರ್. ರಾಜು ಇವರ ಸ್ಮರಣಾರ್ಥವಾಗಿ, ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒಳಗೊಂಡ ಸುಸಜಿತವಾದ ತನಿಖಾ ಠಾಣೆ ( ಚೆಕ್ ಪೋಸ್ಟ್ )ನ್ನು ನಿರ್ಮಿಸಿ ಕೊಟ್ಟಿದ್ದು, ಸದ್ರಿ ತನಿಖಾ ಠಾಣೆ (ಚೆಕ್ ಪೋಸ್ಟ್ಗೆ) ಕಾಂತಾವರ ಗ್ರಾಮ ಪಂಚಾಯತ್ನ ಅಧ್ಯಕ್ಷರಾದ ಶ್ರೀ ರಾಜೇಶ್ ಕೋಟ್ಯಾನ್, ರೋಟರಿ ಕ್ಲಬ್ ಅಧ್ಯಕ್ಷರಾದ ಶ್ರೀ ನವೀನ್ ಚಂದ್ರ ಶೆಟ್ಟಿ ಹಾಗೂ ಇತರ ಸಾರ್ವಜನಿಕರು ಸಹಕರಿಸಿದ್ದು, ಈ ಸುಸಜಿತವಾದ ತನಿಖಾ ಠಾಣೆಯನ್ನು ಪೊಲೀಸ್ ಅಧೀಕ್ಷಕರು ಉಡುಪಿ ಜಿಲ್ಲೆ, ಉಡುಪಿ ಇವರ ನಿದೇರ್ಶನದಂತೆ ಕಾರ್ಕಳ ಉಪ-ವಿಭಾಗದ ಮಾನ್ಯ ಸಹಾಯಕ ಪೊಲೀಸ್ ಅಧೀಕ್ಷಕರಾದ ಡಾ. ಹರ್ಷ ಪ್ರಿಯಂವದಾ ಐ.ಪಿ.ಎಸ್ ರವರು ದಿನಾಂಕ: 12.12.2025 ರಂದು ಉದ್ದಾಟಿಸುವುದರ ಮೂಲಕ ಪೊಲೀಸ್ ಇಲಾಖೆಯ ದೈನಂದಿನ ಕರ್ತವ್ಯಕ್ಕೆ ಹಸ್ತಾಂತರಿಸಿರುತ್ತಾರೆ.
ನಮ್ಮ ವರದಿಗಾರರು

ವಿಲ್ಸನ್ ಡಿಸೋಜ
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now