
ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ವಾಯುಸೇನೆಗೆ ಆಯ್ಕೆಯಾಗಿರುವ ಕೀರ್ತನ್ ಕೆ.ಪಿ ಯವರಿಗೆ ವಿದ್ಯಾಮಾತಾದ ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು. 2023 ರಿಂದ ವಿದ್ಯಾಮಾತಾ ಅಕಾಡೆಮಿಯ ಉಚಿತ ಮಿಲಿಟರಿ ನೇಮಕಾತಿಗಳಿಗೆ ತರಬೇತಿ ಪಡೆಯುತ್ತಿದ್ದ ಪುತ್ತೂರು ತಾಲೂಕು ಉಪ್ಪಿನಂಗಡಿಯ ಹಿರೇಬಂಡಾಡಿ ಗ್ರಾಮದ ಕಂದಲಾಜೆ ನಿವಾಸಿ ಪದ್ಮಯ ಗೌಡ ಮತ್ತು ಪುಷ್ಪಲತಾ ದಂಪತಿಗಳ ಪುತ್ರರಾದ ಕೀರ್ತನ್ ರವರು ವಿವೇಕಾನಂದ ತಾಂತ್ರಿಕ ವಿದ್ಯಾಲಯದಲ್ಲಿ ಡಿಪ್ಲೋಮಾ ಪದವಿ ಓದುತ್ತಿದ್ದಾರೆ. ಓದಿನೊಂದಿಗೆ ವಿದ್ಯಾಮಾತಾ ಅಕಾಡೆಮಿಯಲ್ಲಿ ಮಿಲಿಟರಿ ಹುದ್ದೆಗಳ ನೇಮಕಾತಿಗಳಿಗೆ ತರಬೇತಿಯನ್ನು ಪಡೆಯುತ್ತಿದ್ದರು. ವಿಶೇಷ ಏನೆಂದರೆ ಇವರು ಅಗ್ನಿಪಥ್ ಯೋಜನೆಯಲ್ಲಿ ಭೂಸೇನೆಯ ನೇಮಕಾತಿಯಲ್ಲೂ ಪ್ರಥಮ ಹಂತದ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಅದರಲ್ಲಿ ದೈಹಿಕ ಕ್ಷಮತೆಯ ಪರೀಕ್ಷೆ ಮಾತ್ರ ಬಾಕಿ ಇರುತ್ತದೆ. ಇದರ ಮಧ್ಯೆಯೇ ವಾಯುಸೇನೆಯ ಎಲ್ಲಾ ಹಂತಗಳ ಪರೀಕ್ಷೆಯನ್ನು ಪಾಸ್ ಮಾಡಿ ವಾಯುಸೇನೆಗೆ ಆಯ್ಕೆಯಾಗಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now