
ಮುಂಬಯಿ, : ಭಾರತೀಯ ರೆಡ್ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ 2026-2029ನೇ ಸಾಲಿನ ಕಾರ್ಯಾಧ್ಯಕ್ಷ ಆಗಿ ಸಿಎ| ಶಾಂತಾರಾಮ ಶೆಟ್ಟಿ ಪುನಾರಾಯ್ಕೆಯಾಗಿದ್ದಾರೆ.
ಉಪ ಕಾರ್ಯಾಧ್ಯಕ್ಷ ಆಗಿ ಡಾ| ಬಿ.ಸಚ್ಚಿದಾನಂದ ರೈ, ಕೋಶಾಧಿಕಾರಿ ಆಗಿ ಗುರುದತ್ ನಾಯಕ್ ಆಯ್ಕೆಯಾಗಿದ್ದು, ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ರೆಡ್ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರು ಆಡಳಿತ ಮಂಡಳಿ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿ ಶುಭ ಹಾರೈಸಿದರು.
ನೂತನವಾಗಿ ಚುನಾಯಿತರಾದ ಸಿಎ| ಶಾಂತಾರಾಮ ಶೆಟ್ಟಿ, ಡಾ| ಬಿ.ಸಚ್ಚಿದಾನಂದ ರೈ, ಗುರುದತ್ ನಾಯಕ್, ಡಾ| ಸತೀಶ್ ರಾವ್, ಯತೀಶ್ ಬೈಕಂಪಾಡಿ, ಪುಷ್ಪರಾಜ್ ಜೈನ್, ಡಾ| ಸುಮನ.ಬಿ., ಪಿ.ಬಿ.ಹರೀಶ್ ರೈ, ಸಿಎ| ಶಾಂತಾರಾಮ ಶೆಟ್ಟಿ ಅವರು ಸತತ ೪ನೇ ಅವಧಿಗೆ ರೆಡ್ಕ್ರಾಸ್ ದ.ಕ.ಜಿಲ್ಲಾ ಘಟಕದ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದು, ಪ್ರಸ್ತುತ ಅವರು ನವ ದೆಹಲಿಯ ರೆಡ್ಕ್ರಾಸ್ ಸಂಸ್ಥೆಯ ರಾಷ್ಟ್ರೀಯ ನಿರ್ವಹಣಾ ಮಂಡಳಿ ಸದಸ್ಯರಾಗಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now