
ಉಡುಪಿ : ನಗರದ ಪ್ರತಿಷ್ಠಿತ ಎಂಜಿಎಂ ಕಾಲೇಜು ಬಳಿ ಕಳೆದ ಎರಡು ವರ್ಷಗಳಿಂದ ಕಾರ್ಯಚರಿಸುತ್ತಿರುವ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದಕೋ ಆಪರೇಟಿವ್ ಸೊಸೈಟಿ ಲಿ. ನ ವಾರ್ಷಿಕ ಮಹಾಸಭೆಯು ಜೂನ್ 7ರಂದು ಭಾನುವಾರ ಬೆಳಿಗ್ಗೆ 11 ಗಂಟೆಗೆ ನೂತನ ರವೀಂದ್ರ ಮಂಟಪ ಎಂಜಿಎಂ ಕಾಲೇಜು ಆವರಣದಲ್ಲಿ ನಡೆಯಲಿದೆ ಎಂದು ಸೊಸೈಟಿಯ ಅಧ್ಯಕ್ಷೆ ಜೆಸಿಂತಾ ಡಿಸೋಜಾ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೀವನ್ ಡಿಸೋಜ ತಿಳಿಸಿದ್ದಾರೆ.
ಕಳೆದ ಎರಡು ವರ್ಷಗಳಲ್ಲಿ ಗ್ರಾಹಕರಿಂದ ಸೊಸೈಟಿಗೆ ಉತ್ತಮ ವ್ಯವಹಾರ ದೊರಕಿದ್ದು, ದಿನೇ ದಿನೇ ಉತ್ತಮ ಪ್ರಗತಿ ಹೊಂದುತ್ತಿದೆ. ಗೃಹ, ಚಿನ್ನಾಭರಣ ಮತ್ತು ವಾಹನ ಸಾಲ ನೀಡಲಾಗುತ್ತಿದೆ. ಮಾತ್ರವಲ್ಲದೆ ನಿರ್ದೇಶಕರುಗಳ ಸಹಕಾರದೊಂದಿಗೆ ವಿವಿಧ ಸಾಮಾಜಿಕ ಸೇವಾ ಚಟುವಟಿಕೆಗಳನ್ನು ಉಡುಪಿ ಸಿಂಡಿಕೇಟ್ ಸೌಹಾರ್ದ ಸೊಸೈಟಿ ಮಾಡಿ ಬಂದಿರುತ್ತದೆ.

ನಮ್ಮ ವರದಿಗಾರರು
ಸ್ಟೀವನ್ ಕುಲಾಸೊ
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now