
ಕುಂದಾಪುರ :ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮುಖ್ಯ ಆಯುಕ್ತರಾದ ಡಾI ಪಿ.ಜಿ.ಆರ್ ಸಿಂಧ್ಯಾರವರು ಭೇಟಿ ನೀಡಿ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ದಳ ಹಾಗೂ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಆಯುಕ್ತ ಪ್ರಭಾಕರ ಭಟ್, ಜಿಲ್ಲಾ ಆಯುಕ್ತರಾದ ಇಂದ್ರಾಳಿ ಜಯಕರ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಆನಂದ ಅಡಿಗ, ಎ.ಎಸ್.ಓ.ಸಿ ಸುಮನ್ ಶೇಖರ್, ಹಿರಿಯ ಸ್ಕೌಟ್ಸ್ ಶಿಕ್ಷಕ ಸುಬ್ರಮಣ್ಯರವರು, ಪೂರ್ವ ಪ್ರಾಥಮಿಕ, ಪ್ರಾಥಮಿಕ ಹಾಗೂ ಪದವಿ ಪೂರ್ವ ಕಾಲೇಜಿನ ಮುಖ್ಯಸ್ಥರು ಉಪಸ್ಥಿತರಿದ್ದರು.
ಪ್ರೌಢ ಶಾಲಾ ಮುಖ್ಯ ಶಿಕ್ಷಕ ಶ್ರೀ ಕೃಷ್ಣ ಅಡಿಗ ಸರ್ವರನ್ನು ಸ್ವಾಗತಿಸಿದರು. ಬುಲ್ ಬುಲ್ ಶಿಕ್ಷಕಿ ಪದ್ಮಾವತಿ ಕಾರ್ಯಕ್ರಮವನ್ನು ನಿರೂಪಿಸಿ, ಗೈಡ್ಸ್ ಶಿಕ್ಷಕಿ ರಮಣಿಯವರು ವಂದನಾರ್ಪಣೆಗೈದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now