
ಉಡುಪಿ: ಕಥೊಲಿಕ ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪ್ರಸಾದ ಮೆರವಣಿಗೆ ಇವತ್ತು ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ನಲ್ಲಿ ನಡೆಯಲಿದೆ.
ಮಧ್ಯಾಹ್ನ 3 ಗಂಟೆಗೆ ಜಪಸರ ಪ್ರಾರ್ಥನೆ, ಬಳಿಕ 3.30ಕ್ಕೆ ಧರ್ಮಾಧ್ಯಕ್ಷ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ನೇತೃತ್ವದಲ್ಲಿ ಪವಿತ್ರ ಬಲಿಪೂಜೆ ಜರುಗಲಿದ್ದು, ಬಳಿಕ ಮಿಲಾಗ್ರಿಸ್ ಚರ್ಚಿನಿಂದ ಆರಂಭಗೊಂಡು ಸಂತೆಕಟ್ಟೆ ಮೌಂಟ್ ರೋಸರಿ ಚರ್ಚಿನ ತನಕ ತೆರೆದ ವಾಹನದಲ್ಲಿ ಪರಮ ಪ್ರಸಾದವನ್ನು ಮೆರವಣಿಗೆಯಲ್ಲಿ ಕೊಂಡೊಯ್ದು ಸಾರ್ವಜನಿಕ ಗೌರವ ಸಲ್ಲಿಸಲಾಗುವುದು. ಮೌಂಟ್ ರೋಸರಿ ಚರ್ಚ್ ವಠಾರದಲ್ಲಿ ಧರ್ಮಪ್ರಾಂತ್ಯದ ಧರ್ಮಗುರು ವಂ|ಜೆನ್ಸಿಲ್ ಆಳ್ವಾ ನೇತೃತ್ವದಲ್ಲಿ ದೇವರ ವಾಕ್ಯದ ಮೇಲೆ ಪ್ರವಚನ ನಡೆದ ಬಳಿಕ ಧರ್ಮಾಧ್ಯಕ್ಷರು ಪರಮ ಪ್ರಸಾದದ ಆಶೀರ್ವಚನ ನೆರವೇರಿಸಲಿದ್ದಾರೆ.
ಧರ್ಮಪ್ರಾಂತ್ಯದ ಸುಮಾರು 60 ಅಧಿಕ ಧರ್ಮಗುರುಗಳು ಮತ್ತು 3000 ಕ್ಕೂ ಅಧಿಕ ಕ್ರೈಸ್ತ ಭಾಂಧವರು ಭಾಗವಹಿಸಲಿದ್ದಾರೆ ಎಂದು ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ|ಡೆನಿಸ್ ಡೆಸಾ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now
























