
ಸರಕಾರಿ ಪದವಿ ಪೂರ್ವ ಕಾಲೇಜು ಕೆಮ್ಮಣ್ಣು, ಇಲ್ಲಿ ದಿನಾಂಕ 9/4/25 ರಂದು
ಲಯನ್ಸ್ ಕ್ಲಬ್ ಕಲ್ಯಾಣ್ ಪುರ ಹಾಗೂ ಅಜ್ಜರಕಾಡು ಬ್ಯಾಡ್ಮಿಂಟನ್ ಕ್ಲಬ್ ಇವರ ಸಹಯೋಗದಲ್ಲಿ ಶಟಲ್ ಬ್ಯಾಟ್ಮಿಂಟನ್ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ನಡೆಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಸತೀಶ್ ಶೆಟ್ಟಿ ಅಧ್ಯಕ್ಷರು ಕಾಲೇಜು ಅಭಿವೃದ್ಧಿ ವಿಭಾಗ ಇವರು ವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಶಟಲ್ ಬ್ಯಾಡ್ಮಿಂಟನ್ ತರಬೇತುದಾರರಾದ ಸುರೇಶ್ ಬನ್ನಂಜೆ ಇವರನ್ನು ಗೌರವಿಸಲಾಯಿತು ಹಾಗೂ ತರಬೇತಿಯಲ್ಲಿ ಪಾಲ್ಗೊಂಡ ಎಲ್ಲ ವಿದ್ಯಾರ್ಥಿಗಳಿಗೂ ಪ್ರಶಸ್ತಿ ಪತ್ರವನ್ನು ನೀಡಲಾಯಿತು.
ಮುಖ್ಯ ಅತಿಥಿಗಳಾಗಿ ಮಾಜಿ ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಶ್ರೀ ನಂದ ಕಿಶೋರ್ ಕೆಮ್ಮಣ್ಣು, ಲಯನ್ಸ್ ಕ್ಲಬ್ ಕಲ್ಯಾಣಪುರ ಇದರ ಅಧ್ಯಕ್ಷರಾದ ಲಯನ್ ರೊನಾಲ್ಡ್, ಅಜ್ಜರಕಾಡು ಬ್ಯಾಡ್ಮಿಂಟನ್ ಕ್ಲಬ್ ಇದರ ಅಧ್ಯಕ್ಷರಾದ ಹಿರಿಯ ನ್ಯಾಯವಾದಿ ಶ್ರೀ ಗಣೇಶ್ ಕುಮಾರ್ ಮಟ್ಟು, ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಲಕ್ಷ್ಮೀನಾರಾಯಣ , ಶ್ರೀಮತಿ ಶಾಲಿನಿ ಶೆಟ್ಟಿ ಉಡುಪಿ ಅಥ್ಲೆಟಿಕ್ ಕೋಚ್, ಅಜ್ಜರಕಾಡು ಬ್ಯಾಡ್ಮಿಂಟನ್ ಕ್ಲಬ್ ನ ಸದಸ್ಯರಾದ ದೀಪಕ್ ಕುಮಾರ್, ಶಾಲಾ ಹಿತರಕ್ಷಣಾ ಸಮಿತಿಯ ಗೌರವಾಧ್ಯಕ್ಷರಾದ ನರಸಿಂಹ ಮೂರ್ತಿ, ಹಳೆ ವಿದ್ಯಾರ್ಥಿ ಶ್ರೀಯುತ ಬಾಲಕೃಷ್ಣ, ಯಾದವ ನಾಯ್ಕ ,ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಅನಿತಾ ಉಪಸ್ಥಿತರಿದ್ದರು.
ಹೈಸ್ಕೂಲ್ ವಿಭಾಗದ ಮುಖ್ಯಸ್ಥೆ ಶ್ರೀಮತಿ ವಂದನ ಸ್ವಾಗತಿಸಿದರು. ಇಂಗ್ಲಿಷ್ ಶಿಕ್ಷಕಿ ಶ್ರೀಮತಿ ಗ್ರೇಸಿ ಬಾಂಜಿ ವಂದಿಸಿದರು. ಕನ್ನಡ ಭಾಷಾ ಶಿಕ್ಷಕಿ ಶ್ರೀಮತಿ ಶಾಲಿನಿ ಕೆ.ಎನ್. ಕಾರ್ಯಕ್ರಮ ನಿರೂಪಿಸಿದರು




Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now
























