ನೇಮೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸೌಹಾರ್ದತೆ ಮೆರೆದ ಕೈಸ್ತ ಧರ್ಮಗುರು

ನೇಮೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸೌಹಾರ್ದತೆ ಮೆರೆದ ಕೈಸ್ತ ಧರ್ಮಗುರು

0Shares

ಮಲ್ಪೆ: ಇಲ್ಲಿನ ಬಡಾನಿಡಿಯೂರು ತೊಟ್ಟಂ ತಿಮ್ಮ ಪೂಜಾರಿ ಕುಟುಂಬಸ್ಥರು ಆರಾಧಿಸಿಕೊಂಡು ಬಂದಿರುವ ಶ್ರೀ ಚಿಕ್ಕಮ್ಮ ದೇವಿ ಸಹಿತ ಪರಿವಾರ ದೈವಗಳ ಪುನರ್ ಪ್ರತಿಷ್ಠೆ ಹಾಗೂ ನೇಮೋತ್ಸವ ಕಾರ್ಯಕ್ರಮಕ್ಕೆ ಭೇಟಿ ನೀಡುವ ಮೂಲಕ ಸ್ಥಳೀಯ ತೊಟ್ಟಂ ಸಂತ ಅನ್ನಮ್ಮ ಚರ್ಚಿನ ಧರ್ಮಗುರುಗಳಾದ ವಂ|ಡೆನಿಸ್ ಡೆಸಾ ಸೌಹಾರ್ದತೆಗೆ ಸಾಕ್ಷಿಯಾದರು.

ದೈವಸ್ಥಾನದ ಪದಾಧಿಕಾರಿಗಳ ಆಹ್ವಾನದ ಮೇರೆಗೆ ಭೇಟಿ ನೀಡಿದ ಧರ್ಮಗುರುಗಳು ನೇಮೋತ್ಸವ ನಡೆಯುವ ಧಾರ್ಮಿಕ ವಿಧಿವಿಧಾನಗಳ ಕುರಿತು ಮಾಹಿತಿಯನ್ನು ಪಡೆದುಕೊಂಡರು. ಹಾಗೂ ದೈವಗಳ ಪುನರ್ ಪ್ರತಿಷ್ಠೆ ಹಾಗೂ ನೇಮೋತ್ಸವ ಕಾರ್ಯಕ್ರಮಕ್ಕೆ ಶುಭಕೋರಿದರು. ಈ ವೇಳೆ ದೈವಸ್ಥಾನದ ವತಿಯಿಂದ ಧರ್ಮಗುರುಗಳನ್ನು ಶಾಲು ಹೊದಿಸಿ ಗೌರವಿಸಲಾಯಿತು.

ಈ ವೇಳೆ ಸ್ಥಳೀಯ ಮುಖಂಡರಾದ ರಮೇಶ್, ಉಮೇಶ್, ತಿಮ್ಮ ಪೂಜಾರಿ ಕುಟುಂಬಸ್ಥರು, ತೊಟ್ಟಂ ಚರ್ಚಿನ ಅಂತರ್ ಧರ್ಮಿಯ ಆಯೋಗದ ಸಂಚಾಲಕರಾದ ಆಗ್ನೆಲ್ ಫೆರ್ನಾಂಡಿಸ್, 20 ಆಯೋಗಗಳ ಸಂಚಾಲಕಿ ವನಿತಾ ಫೆರ್ನಾಂಡಿಸ್, ರೈಮಂಡ್ ಫೆರ್ನಾಂಡಿಸ್, ನಿಕೋಲಸ್ ಫೆರ್ನಾಂಡಿಸ್ ಉಪಸ್ಥಿತರಿದ್ದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now