
ಯುವ ವಿಚಾರ ವೇದಿಕೆ ಕೊಳಲಗಿರಿ ಹಾಗೂ ಜೆಸಿಐ ಕಲ್ಯಾಣಪುರ ಜಂಟಿ ಸಹಯೋಗದಲ್ಲಿ ಮಹಿಳಾ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ
ಯುವ ವಿಚಾರ ವೇದಿಕೆಯ ರಜತ ಸಂಭ್ರಮದ ಅಂಗವಾಗಿ ಜೆಸಿಐ ಕಲ್ಯಾಣಪುರ ಹಾಗೂ ಸರಕಾರಿ ಪ್ರೌಢ ಶಾಲೆ ಉಪ್ಪೂರು ಇವರ ಜಂಟಿ ಸಹಯೋಗದೊಂದಿಗೆ ಮಹಿಳೆಯರಿಗಾಗಿ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ ಸರಕಾರಿ ಪ್ರೌಢ ಶಾಲೆ ಕೊಳಲಗಿರಿಯಲ್ಲಿ ನಡೆಸಲಾಯಿತು. ಕಾರ್ಯಗಾರವನ್ನು ಸಂಪನ್ಮೂಲ ವ್ಯಕ್ತಿಯಾದ ಸುಮತಿ ಸುವರ್ಣ ಅಮ್ಮುಂಜೆ ನೆರವೇರಿಸಿ ಕೊಟ್ಟರು. ತದನಂತರ ಯುವ ವಿಚಾರ ವೇದಿಕೆಯ ಸದಸ್ಯರು ಹಾಗೂ ರಂಗ ನಿರ್ದೇಶಕರು ಸಂಪನ್ಮೂಲ ವ್ಯಕ್ತಿ ಯೋಗೀಶ್ ಕೊಳಲಗಿರಿ ಅವರು ಶಾಲಾ ವಿದ್ಯಾರ್ಥಿಗಳಿಗೆ ಮನೋರಂಜನೆ ಆಟ ಸ್ಪರ್ಧೆಗಳನ್ನು ನಡೆಸಿಕೊಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿ. ಶ್ವೇತ ಅರುಣ್ ವಹಿಸಿದ್ದು ಮುಖ್ಯ ಅತಿಥಿಗಳಾಗಿ ಜೆಸಿಐ ಕಲ್ಯಾಣಪುರದ ಅಧ್ಯಕ್ಷರಾದ ಜೆಸಿ. ಎವಿಟ ಡಿಸೋಜಾ, ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸಂಧ್ಯಾ ಸರಸ್ವತಿ, ಯುವ ವಿಚಾರ ವೇದಿಕೆಯ ಪ್ರಧಾನ ಕಾರ್ಯದರ್ಶಿ ಸದಾಶಿವ್ ಕುಮಾರ್, ಜೊತೆ ಕಾರ್ಯದರ್ಶಿ ಶಕುಂತಳಾ, ಜೆಸಿಐ ಕಲ್ಯಾಣಪುರ ಕಾರ್ಯದರ್ಶಿ ಜೆಸಿ. ರಶ್ಮಿಸುರೇಶ್ ಉಪಸ್ಥಿತರಿದ್ದರು.
ಪ್ರೌಢ ಶಾಲೆಯ ವಿದ್ಯಾರ್ಥಿನಿಯರು, ವೇದಿಕೆಯ ಮಹಿಳಾ ಸದಸ್ಯರು, ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರದ ಪ್ರಯೋಜನ ಪಡೆದುಕೊಂಡರು. ವೇದಿಕೆಯ ಸದಸ್ಯರು ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ವಿವಿಧ ಸ್ಪರ್ಧೆಗಳ ವಿಜೇತರಿಗೆ ಸಮಾರೋಪ ಕಾರ್ಯಕ್ರಮದಲ್ಲಿ ಬಹುಮಾನ ವಿತರಣೆ ಮಾಡಲಾಯಿತು. ಹೈನುಗಾರಿಕೆ ಕ್ಷೇತ್ರದಲ್ಲಿ ಕೃಷಿಕರಾದ ವಿಜಯಲಕ್ಷ್ಮಿ ಮಾಂತೇಶ್ ಇವರನ್ನು ಸನ್ಮಾನಿಸಲಾಯಿತು.
ವೇದಿಕೆಯ ಶಾಂತಾ ಸೆಲ್ವರಾಜ್ ರವರು ಸಂಪನ್ಮೂಲ ವ್ಯಕ್ತಿಯವರ ವ್ರತ್ತಿಸಾಧನೆಯನ್ನು ಪರಿಚಯಿಸಿಕೊಟ್ಟರು. ಸುಬ್ರಹ್ಮಣ್ಯ ಆಚಾರ್ಯ ಸರ್ವರಿಗೂ ವಂದಿಸಿದರು.







Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now
























