
ಬೆಂಗಳೂರು: ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಗುರುಪಾದ ಗೌಡ ಸಂಗನಗೌಡ ಪಾಟೀಲ (ಜಿ.ಎಸ್. ಪಾಟೀಲ್) ಅವರನ್ನು ಆಯ್ಕೆ ಮಾಡಲಾಯಿತು.
ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರು ನೂತನ ಸಚಿವರನ್ನು ಸದನಕ್ಕೆ ಪರಿಚಯಿಸಿದ ನಂತರ ಹಂಗಾಮಿ ಸಭಾಧ್ಯಕ್ಷ ಟಿ.ಬಿ. ಜಯಚಂದ್ರ ಅವರು ನೂತನ ಸಭಾಧ್ಯಕ್ಷರ ಆಯ್ಕೆ ಪ್ರಸ್ತಾವವನ್ನು ಮಂಡಿಸುವಂತೆ ಮುಖ್ಯಮಂತ್ರಿಗೆ ಸೂಚಿಸಿದರು. ಅದರಂತೆ ಮುಖ್ಯಮಂತ್ರಿ ಗುರುಪಾದಗೌಡ ಸಂಗನಗೌಡ ಪಾಟೀಲ ಅವರನ್ನು ವಿಧಾನಸಭೆಯ ನೂತನ ಸಭಾಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಪ್ರಸ್ತಾವ ಮಂಡಿಸಿದರು. ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಅನುಮೋದಿಸಿದರು. ಈ ಪ್ರಸ್ತಾಪಕ್ಕೆ ಸದನ ಧ್ವನಿಮತದಿಂದ ಒಪ್ಪಿಗೆ ನೀಡಿತು.
ಹಂಗಾಮಿ ಸಭಾಧ್ಯಕ್ಷ ಟಿ.ಬಿ. ಜಯಚಂದ್ರ ಅವರು ಗುರುಪಾದ ಗೌಡ ಸಂಗನಗೌಡ ಪಾಟೀಲ್ ಅವರು ನೂತನ ಸಭಾಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now