
ಬೆಂಗಳೂರು : ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಮಾಜಿ ಜಿಲ್ಲಾಧ್ಯಕ್ಷರಾದ ಅನ್ಸಾರ್ ಅಹಮದ್ ರವರ ಸೂಚನೆಯ ಮೇರೆಗೆ ಉಡುಪಿ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ಸುಜಯ್ ಪೂಜಾರಿ ಹಾಗೂ ಜಿಲ್ಲಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಶ್ರೀಮತಿ ಜ್ಯೋತಿ ಸೇರಿಗಾರ್ತಿ ರವರನ್ನು ರಾಜ್ಯಾಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿಯವರು ನೇಮಕಗೊಳಿಸಿ ಅದೇಶ ಹೊರಡಿಸಿರುತ್ತಾರೆ.
ಅನ್ಸಾರ್ ಅಹಮದ್ ರವರನ್ನು ಉಡುಪಿ ಜಿಲ್ಲಾ ಗೌರವಾಧ್ಯಕ್ಷ ರನ್ನಾಗಿ ನೇಮಿಸಿ ಸಂಘಟನೆಯನ್ನು ಅನ್ಸಾರ್ ಅಹಮದ್ ರವರ ನೇತೃತ್ವದಲ್ಲಿ ಮುನ್ನಡೆಸಿಕೊಂಡು ಹೋಗುವಂತೆ ಸೂಚನೆ ನೀಡಿರು ತ್ತಾರೆ.
ಈ ಸಂದರ್ಭದಲ್ಲಿ ಕರವೇ ರಾಜ್ಯ ಕಾರ್ಯದರ್ಶಿ ಲೋಕೇಶ್, ಕರವೇ ಮುಖಂಡರಾದ ಸೈಯದ್ ನಿಜಾಮುದ್ದೀನ್, ಅನುಷಾ ಆಚಾರ್ ಪಳ್ಳಿ, ಸಂತೋಷ್ ಕುಲಾಲ್, ವಿಜಯ ಪೂಜಾರಿ, ಗೋಪಾಲ್ ದೊರೆ, ನಾಗರಾಜ್ ಮೊದಲಾದವರು ಉಪಸ್ಥಿತರಿದ್ದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now
























