
ಸ್ಪೂರ್ತಿದಾಯಕ ಕಲಿಕೆಗಾಗಿ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ.
ಪಿ.ಎಂ.ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ. ಬ್ರಹ್ಮಾವರ ಇಲ್ಲಿ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕ ಕಲಿಕೆಗಾಗಿ ವ್ಯಕ್ತಿತ್ವ ವಿಕಸನ ಕಾರ್ಯಕ್ರಮವನ್ನು ನಡೆಸಲಾಯಿತು.ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಯೋಗೀಶ್ ಗಾಣಿಗ ಕೊಳಲಗಿರಿ ಇವರು ವಿದ್ಯಾರ್ಥಿಗಳಿಗೆ ಹಲವಾರು ಚಟುವಟಿಕೆಗಳ ಮೂಲಕ ತಮ್ಮ ವ್ಯಕ್ತಿತ್ವವನ್ನು ಯಾವ ರೀತಿ ಬೆಳೆಸಿಕೊಳ್ಳಬೇಕು ಮತ್ತು ವಿದ್ಯಾರ್ಥಿಗಳು ತಮ್ಮಲ್ಲಿದ್ದ ಅಡಗಿರುವ ಸುಪ್ತ ಪ್ರತಿಭೆಯನ್ನು ಯಾವ ರೀತಿ ತೋರ್ಪಡಿಸಬೇಕು ಎಂಬುದನ್ನು ಮಕ್ಕಳಿಗೆ ತಿಳಿಸಿದರು. ಇಲಾಖಾ ಅಧಿಕಾರಿಗಳಾದ ಶ್ರೀಮತಿ ಪದ್ಮಾ (ಕ್ಷೇತ್ರ ಸಂಪನ್ಮೂಲ ವ್ಯಕ್ತಿ)ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು . ಪಿ .ಎಂ.ಶ್ರೀ ಶಾಲಾ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಹಲವು ಕಾರ್ಯಕ್ರಮ ಹಾಗೂ ಸೌಲಭ್ಯಗಳು ಸಿಗುತ್ತವೆ. ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ತಮ್ಮನ್ನು ತೊಡಗಿಸಿ ಕೊಳ್ಳಬೇಕು ಎಂದು ಹೇಳಿದರು. ಶಾಲಾಭಿವೃಧ್ಧಿ ಸಮಿತಿಯ ಉಪಾಧ್ಯಕ್ಷರಾದ ರವೀಂದ್ರ ಕೊಳಲಗಿರಿ , ಕುಕ್ಕೆಹಳ್ಳಿ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಶಾಂತ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸರಸ್ವತಿ , ಶಾಲಾಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಅಧ್ಯಾಪಕರು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಸರಸ್ವತಿ ಸರ್ವರನ್ನು ಸ್ವಾಗತಿಸಿದರು, ದೈಹಿಕ ಶಿಕ್ಷಕರಾದ ಗಣೇಶ್ ರವರು ವಂದನಾರ್ಪಣೆ ಗೈದರು.




Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now
























