
ಪ್ರಧಾನ ಮಂತ್ರಿ ಬಾಲಪುರಸ್ಕಾರಕ್ಕೆ ನಾಮ ನಿರ್ದೇಶನಗೊಂಡಿರುವ ದೀಪೇಶ್ ದೀಪಕ್ ಶೆಣೈ ಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಸಡಗರದಲ್ಲಿ ಪ್ರಜಾಪಿತ ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲದಿಂದ ಗೌರವ ಸನ್ಮಾನ

ಟಿ.ಎ. ಪೈ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್ ಕುಂಜಿಬೆಟ್ಟು ಉಡುಪಿಯಲ್ಲಿ ಇಸ್ವಿ 1978ರಲ್ಲಿ ಪದ್ಮಶ್ರೀ ಡಾ. ಟಿ. ಎಂ. ಎ. ಪೈಯವರಿಂದ ಸ್ಥಾಪಿತವಾಗಿ ಪ್ರಸ್ತುತ ಅಕಾಡಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲದ ಆಡಳಿತದಲ್ಲಿರುವ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ಗೆ, ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಉಡುಪಿ ವಲಯದಲ್ಲಿ ನಡೆದ ಭವ್ಯ ಸಾಂಸ್ಕೃತಿಕ ಉತ್ಸವದಲ್ಲಿ ಪ್ರಜಾಪಿತ ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ಅಖಿಲ ಭಾರತ ಮಟ್ಟದ ಶೈಕ್ಷಣಿಕ ಸಾಧನೆ ಹಾಗೂ ಧೈರ್ಯ/ಸಾಹಸ ದ ಕ್ಷೇತ್ರದಲ್ಲಿ ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಕೊಡಮಾಡುವ ಅತ್ಯುನ್ನತ ಗೌರವಯುತ ಪ್ರಶಸ್ತಿಯಾದ “ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪ್ರಶಸ್ತಿ (PMRBP)”ಗೆ ನಾಮನಿರ್ದೇಶನಗೊಂಡಿದ್ದಕ್ಕಾಗಿ ಗೌರವಿಸಲ್ಪಟ್ಟರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now