
ಗೋವಾ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಗೋವಾ ಪ್ರವಾಸದ ವೇಳೆ ದಕ್ಷಿಣ ಗೋವಾದ ಬೆನೌಲಿಂ ಬೀಚ್ನಲ್ಲಿ ಸಾಂಪ್ರದಾಯಿಕ ಮೀನುಗಾರ ‘ಪೆಲೆ’ ಅವರನ್ನು ಭೇಟಿ ಮಾಡಿ, ಸ್ಥಳೀಯ ಮೀನುಗಾರರ ಸಮಸ್ಯೆಗಳ ಕುರಿತು ಚರ್ಚಿಸಿದರು.
ಸಂಭಾಷಣೆ ವೇಳೆ ಪೆಲೆ, ಮುಂಬೈನಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಪ್ರವಾಸಿಗರಿಂದ ಕಳೆದ ಒಂದು ವರ್ಷದಲ್ಲಿ ಸ್ಥಳೀಯ ಸಾಂಪ್ರದಾಯಿಕ ಮೀನುಗಾರರ ಜೀವನೋಪಾಯಕ್ಕೆ ನೆರವಾಗಿದೆ ಎಂದು ಶಿಂಧೆ ಅವರಿಗೆ ಧನ್ಯವಾದ ತಿಳಿಸಿದರು. ಜೊತೆಗೆ, ಸಾಂಪ್ರದಾಯಿಕ ಮೀನುಗಾರರ ಹಿತಾಸಕ್ತಿಗೆ ಧಕ್ಕೆಯಾಗದ ರೀತಿಯಲ್ಲಿ ಕೇಂದ್ರ ಸರ್ಕಾರದಿಂದ ಅಗತ್ಯ ಸೌಲಭ್ಯಗಳು ಹಾಗೂ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಿದರು.
ಮೀನುಗಾರರ ಮನವಿಗೆ ಸ್ಪಂದಿಸಿದ ಏಕನಾಥ್ ಶಿಂಧೆ, ಈ ವಿಷಯವನ್ನು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರೊಂದಿಗೆ ಚರ್ಚಿಸಿ, ಮೀನುಗಾರರ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now