
ಹಾಸನ: ಓವರ್ಟೇಕ್ ಮಾಡುವಾಗ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಓರ್ವ ಮಹಿಳೆ ಸಾವನ್ನಪ್ಪಿ, ಮೂವರು ಗಾಯಗೊಂಡಿರುವ ಘಟನೆ ಹಾಸನ ತಾಲೂಕಿನ ಕಾರೇಕೆರೆ ಗ್ರಾಮದ ಕೃಷಿ ಕಾಲೇಜು ಎದುರು ನಡೆದಿದೆ.
ಹಾಸನ ನಗರದ ಕೆ.ಹೊಸಕೊಪ್ಪಲು ಬಡಾವಣೆ ನಿವಾಸಿ ಶಾಂತಮ್ಮ (45) ಮೃತ ದುರ್ದೈವಿ. ಬೆಂಗಳೂರು ಕಡೆಯಿಂದ ಬರುತ್ತಿದ್ದ ಆಲ್ಲೋ ಹಾಗೂ ವ್ಯಾಗನರ್ ಕಾರುಗಳು ಕಾರೇಕೆರೆ ಬಳಿ ಫೈಓವರ್ ಬಳಿ ಓವರ್ಟೇಕ್ ಮಾಡುವಾಗ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಎರಡೂ ಕಾರುಗಳು ಪಲ್ಟಿಯಾಗಿವೆ.
ವ್ಯಾಗನರ್ ಕಾರಿನಲ್ಲಿದ್ದ ಪತಿ ಹಾಗೂ ಗರ್ಭಿಣಿ ಪತ್ನಿ ಅಪಘಾತದ ನಂತರ ಬೇರೆ ಕಾರಿನಲ್ಲಿ ಆಸ್ಪತ್ರೆಗೆ ತೆರಳಿದ್ದಾರೆ. ಅಲ್ಲೋ ಕಾರಿನಲ್ಲಿದ್ದ ಕೆ.ಹೊಸಕೊಪ್ಪಲು ಬಡಾವಣೆಯ ನಾಗೇಶ, ಯುಕ್ತಿ, ಗೌರಮ್ಮ, ಶಾಂತಮ್ಮರ ಪೈಕಿ ಶಾಂತಮ್ಮ ಸ್ಥಳದಲ್ಲೇ ಮೃತಪಟ್ಟಿದ್ದು, ಆರು ವರ್ಷದ ಯುಕ್ತಿ ಎಂಬ ಮಗುವಿಗೆ ಗಾಯಗಳಾಗಿವೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now
























