
ಕಲಬುರಗಿ: ಭೀಕರ ರಸ್ತೆ ಅಪಘಾತದಲ್ಲಿ ಐವರು ಭಕ್ತರು ಸ್ಥಳದಲ್ಲೇ ಮೃತಪಟ್ಟಿರೋ ಘಟನೆ ನೆಲೋಗಿ ಕ್ರಾಸ್ ಬಳಿ ನಡೆದಿದೆ. ಮೃತ ಐವರು ಬಾಗಲಕೋಟೆ ನಿವಾಸಿಗಳು ಎಂದು ತಿಳಿದು ಬಂದಿದೆ. ಮೃತರ ಹೆಸರು ಇನ್ನೂ ಪತ್ತೆಯಾಗಿಲ್ಲ.
ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಾಗಲಕೋಟೆಯಿಂದ ಕಲಬುರಗಿಯ ಖಾಜಾ ಬಂದೇನವಾಜ್ ದರ್ಗಾಕ್ಕೆ ಆಗಮಿಸುತ್ತಿದ್ದರು. ಆದರೆ ಇದೇ ವೇಳೆ ನಿಂತ ಲಾರಿಗೆ ಹಿಂದಿನಿಂದ ಬಂದ ಟಿಟಿ ವಾಹನ ಡಿಕ್ಕಿ ಹೊಡೆದಿದೆ.
15ಕ್ಕೂ ಹೆಚ್ಚು ಭಕ್ತರಿದ್ದ ಟಿಟಿ ವಾಹನ ಏಕಾಏಕಿ ಪಂಚರ್ ಆಗಿ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ವೇಗವಾಗಿ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ 4 ಭಕ್ತರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಇನ್ನೊಬ್ಬರು ಕಲಬುರಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now























