
ಕಲ್ಬುರ್ಗಿ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದ ಮಾಜಿ ಸಚಿವರು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ಮುಖ್ಯ ಆಯುಕ್ತರಾದ ಪಿ. ಜಿ. ಆರ್. ಸಿಂಧ್ಯಾರವರಿಗೆ ಉಡುಪಿ ಜಿಲ್ಲಾ ಸಂಸ್ಥೆಯಿಂದ ಗೌರಾವಭಿನಂದನೆಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಮುಖ್ಯ ಆಯುಕ್ತರಾದ ಇಂದ್ರಾಳಿ ಜಯಕರ್ ಶೆಟ್ಟಿ, ರಾಜ್ಯ ಸಂಘಟನಾ ಆಯುಕ್ತರಾಗಿರುವ ಎಂ ಪ್ರಭಾಕರ್ ಭಟ್, ಉಡುಪಿ ಜಿಲ್ಲಾ ಸ್ಕೌಟ್ ಆಯುಕ್ತ ಜನಾರ್ದನ್ ಕೊಡವೂರು, ಜಿಲ್ಲಾ ಕಾರ್ಯದರ್ಶಿ ಆನಂದ್ ಅಡಿಗ, ಜಿಲ್ಲಾ ಖಜಾಂಚಿ ಹರಿಪ್ರಸಾದ್ ರೈ, ಜಿಲ್ಲಾ ಉಪಾಧ್ಯಕ್ಷರುಗಳಾದ ದೀಪಿಕಾ ಸುಭಾಷ್ ಶೆಟ್ಟಿ, ಮಹಮ್ಮದ್ ಮೌಲ, ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾಗಿರುವ ಸುಮನ್ ಶೇಖರ್, ಬೈಂದೂರು ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಶ್ರೀ ನರಸಿಂಹ ದೇವಾಡಿಗ, ಕುಂದಾಪುರ ಸ್ಥಳೀಯ ಸಂಸ್ಥೆ ಅಧ್ಯಕ್ಷೆ ಗುಣ ರತ್ನ ಉಡುಪಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ವಿನ್ಸೆಂಟ್ ಡಿಕೋಸ್ಟ, ಕಾಪು ಸ್ಥಳೀಯ ಸಂಸ್ಥೆಯ ಅಧ್ಯಕ್ಷೆ ಗೀತಾ ಕೋಟ್ಯಾನ್, ಬ್ರಹ್ಮಾವರ ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಆರ್ ಟಿ ಭಟ್, ಉಡುಪಿ ಸ್ಥಳೀಯ ಸಂಸ್ಥೆಯ ಕಾರ್ಯ ಶೇಖರ್ ಪೂಜಾರಿ, ಹಾಗೂ ಜಿಲ್ಲೆ ಮತ್ತು ಸ್ಥಳೀಯ ಸಂಸ್ಥೆಗಳ ಪದಾಧಿಕಾರಿಗಳು, ಸೀನಿಯರ್ ರೋವರ್ ರೇಂಜರ್ಸ್ ಉಪಸ್ಥಿರಿದ್ದರು
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now