ಯುವ ವಿಚಾರ ವೇದಿಕೆ ಕೊಳಲಗಿರಿ ಆರೋಗ್ಯ ಮಾಹಿತಿ ಕಾರ್ಯಕ್ರಮ

ಯುವ ವಿಚಾರ ವೇದಿಕೆ ಕೊಳಲಗಿರಿ ಆರೋಗ್ಯ ಮಾಹಿತಿ ಕಾರ್ಯಕ್ರಮ

0Shares

ಯುವ ವಿಚಾರ ವೇದಿಕೆ ಕೊಳಲಗಿರಿ ಇದರ ರಜತಸಂಭ್ರಮದ 18ನೇ ಕಾರ್ಯಕ್ರಮ ಆರೋಗ್ಯ ಮಾಹಿತಿ ಉಪ್ಪೂರು ಸರಕಾರಿ ಪ್ರೌಢಶಾಲೆಯಲ್ಲಿ ಜರುಗಿತು… ಉಡುಪಿ ಜಿಲ್ಲಾ ಪ್ರಭಾರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶಶಿಧರ್ ಹೆಚ್ ಅವರು ವಿದ್ಯಾರ್ಥಿಗಳು ತಮ್ಮ ಆರೋಗ್ಯ ಕಾಪಾಡುವಲ್ಲಿ ಏನು ಮಾಡಬೇಕು ಹಾಗೂ ಮಲೇರಿಯಾ, ಡೆಂಗ್ಯೂ ಕಾಯಿಲೆ ರೋಗಲಕ್ಷಣ ಮತು ರೋಗ ಹರಡದಂತೆ ಹೇಗೆ ಮುನ್ನೆಚ್ಚರಿಕೆ ವಹಿಸಬೇಕು ಅನ್ನುವುದನ್ನು ತಿಳಿಸಿದರು..
ಶಾಲಾ ಮುಖ್ಯೋಪಾಧ್ಯಾಯರಾದ ಸಂಧ್ಯಾ ಸರಸ್ವತಿ ಅವರು ಸಭಾಧ್ಯಕ್ಷತೆ ವಹಿಸಿದ್ದರು.. ವೇದಿಕೆಯಲ್ಲಿ ಯುವ ವಿಚಾರ ವೇದಿಕೆ ಜೊತೆ ಕಾರ್ಯದರ್ಶಿ ಶಕುಂತಲಾ ಸುಕೇಶ್, ಸಾಂಸ್ಕೃತಿಕ ಕಾರ್ಯದರ್ಶಿ ರವೀಂದ್ರ ಕುಮಾರ್ ಮತ್ತು ಸಮುದಾಯ ಆರೋಗ್ಯ ಕೇಂದ್ರ ಕೊಳಲಗಿರಿ ಇಲ್ಲಿನ ಅಧಿಕಾರಿಗಳು.. ಆಶಾ ಕಾರ್ಯಕರ್ತೆಯರು ಶಾಲಾ ಅಧ್ಯಾಪಕ ವೃಂದ ಉಪಸ್ಥಿತರಿದ್ದರು.. ಯೋಗೀಶ್ ಕೊಳಲಗಿರಿ ಕಾರ್ಯಕ್ರಮ ನಿರೂಪಿಸಿದರು….
ಯುವ ವಿಚಾರ ವೇದಿಕೆಯ ಮಾಜಿ ಅಧ್ಯಕ್ಷರಾದ ದಿನೇಶ್ ಶೆಟ್ಟಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕಾರ ನೀಡಿದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now