ಮಂಗಳೂರು: “ಯೋಗವು ದೇಹ, ಮನಸ್ಸು ಮತ್ತು ಆತ್ಮದ ಬಗ್ಗೆ ಜಾಗೃತಿ ಮೂಡಿಸುವ ಸಾಧಕ”.

ಮಂಗಳೂರು: “ಯೋಗವು ದೇಹ, ಮನಸ್ಸು ಮತ್ತು ಆತ್ಮದ ಬಗ್ಗೆ ಜಾಗೃತಿ ಮೂಡಿಸುವ ಸಾಧಕ”.

0Shares

ಮಂಗಳೂರು: “ಯೋಗವು ದೇಹ, ಮನಸ್ಸು ಮತ್ತು ಆತ್ಮದ ಬಗ್ಗೆ ಜಾಗೃತಿ ಮೂಡಿಸುವ ಸಾಧಕ”.

ಅಂತರಾಷ್ಟ್ರೀಯ ಯೋಗ ದಿನದ ಪ್ರಯುಕ್ತವಾಗಿ ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲರು , 5 KAR NCC ನೌಕಾಪಡೆ ಘಟಕದ ಕೆಡೆಟ್ಗಳು ಹಾಗೂ ಎನ್ ಸಿ ಸಿ ಅಧಿಕಾರಿಗಳು ಜೊತೆಗೂಡಿ ಈ ವರ್ಷದ ಯೋಗ ದಿನವನ್ನು ಕದ್ರಿ ಪಾರ್ಕ್ ಬಳಿ ಇರುವ ಯುದ್ಧ ಸ್ಮಾರಕದಲ್ಲಿ ಆಚರಿಸಲಾಯಿತು .

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಭಾರತೀಯ ನೌಕಾಪಡೆಯ ನಿವೃತ್ತ ಪಿ. ಒ ಸುಧೀರ್ ಪೈ ಯೋಗ ದಿನದ ಮಹತ್ವ ಮತ್ತು ಅದರ ಪ್ರಯೋಜನಗಳ ಬಗ್ಗೆ ಮಾತನಾಡಿದರು. ಸಶಸ್ತ್ರ ಪಡೆಗಳಿಗೆ ಸೇರುವ ಪ್ರಸ್ತುತತೆಯನ್ನು ಅವರು ತಿಳಿಸಿದರು.
ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಗಣಪತಿ ಗೌಡ ಯೋಗದಿಂದ ಶರೀರಕ್ಕೆ ಉಂಟಾಗುವ ಉಪಯೋಗದ ಬಗ್ಗೆ ತಿಳಿಸಿದರು .

“ಒಂದು ಭೂಮಿ ಮತ್ತು ಒಂದು ಆರೋಗ್ಯಕ್ಕಾಗಿ”. ಎಂಬ ಧ್ಯೇಯ ವಾಕ್ಯದೊಂದಿಗೆ ಈ ವರ್ಷದ ವಿಶ್ವ ಯೋಗ ದಿನಾಚರಣೆಯನ್ನು ಮಹತ್ವಪೂರ್ಣವಾಗಿ ಆಚರಿಸಲಾಯಿತು. ಯೋಗವು ಒಟ್ಟಾರೆ ಯೋಗಕ್ಷೇಮ ಮತ್ತು ಸಾಮರಸ್ಯವನ್ನು ಉತ್ತೇಜಿಸಲು ಸಹಕಾರಿ. ದೈಹಿಕ ಭಂಗಿಗಳು, ಉಸಿರಾಟದ ತಂತ್ರಗಳು ಮತ್ತು ಧ್ಯಾನವನ್ನು ಸಂಯೋಜಿಸಿ ಮನಸ್ಸು-ದೇಹವನ್ನು ಆರೋಗ್ಯವಾಗಿಡಲು ಯೋಗವು ಸಹಕಾರಿಯಾಗುತ್ತದೆ ಎಂದು ಮುಖ್ಯ ಅತಿಥಿ ಅಭಿಪ್ರಾಯ ಪಟ್ಟರು.

ಈ ಕಾರ್ಯಕ್ರಮದಲ್ಲಿ ಲೆಫ್ಟಿನೆಂಟ್‌ ಕಮಾಂಡರ್ ಪ್ರೊ. ಯತೀಶ್‌ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು , ಮೇಜರ್‌ ಡಾ.ಜಯರಾಜ್‌ ವಂದಿಸಿದರು.
ಯೋಗ ಪ್ರದರ್ಶನದಲ್ಲಿ ವಿವಿ ಕಾಲೇಜಿನ 10 ಕೆಡೆಟ್ ಗಳು ಮತ್ತು 14 ಜನ ಸೈನಿಕರು ಉಪಸ್ಥಿತರಿದ್ದರು. ಕೆಡೆಟ್‌ಗಳು ಸೂರ್ಯ ನಮಸ್ಕಾರ , ಪದ್ಮಾಸನ , ಧನುರಾಸನ , ನಟರಾಜಾಸನವನ್ನು ಪ್ರದರ್ಶಿಸಿದರು .

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now