
ಶಿರ್ವ* : ಇಲ್ಲಿನ ಮುದರಂಗಡಿ ಪೇಟೆಯ ಸಮೀಪ ಇಂದು (ಡಿಸೆಂಬರ್ 26) ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟಿದ್ದಾರೆ. ಮುದರಂಗಡಿ ಅಗರ್ ದಂಡೆ ನಿವಾಸಿ ಜಾಸ್ವಿನ್ ಡಿಸೋಜ (23) ಮೃತಪಟ್ಟ ದುರ್ದೈವಿ.

ಘಟನೆಯ ವಿವರ:
ಡಿಸೆಂಬರ್ 26ರಂದು ಮುಂಜಾನೆ ಸುಮಾರು 3:40ರ ವೇಳೆಗೆ ಈ ಅಪಘಾತ ಸಂಭವಿಸಿದೆ. ಜಾಸ್ವಿನ್ ಅವರು ತಡರಾತ್ರಿವರೆಗೆ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ವಾಪಸ್ ಮನೆಗೆ ಮರಳುತ್ತಿದ್ದಾಗ, ಮುದರಂಗಡಿ ಪೇಟೆ ಸಮೀಪದ ರಸ್ತೆ ಪಕ್ಕದಲ್ಲಿದ್ದ ಡಿವೈಡರ್ಗೆ ಸ್ಕೂಟರ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಜಾಸ್ವಿನ್ ಅವರು ತೀವ್ರವಾಗಿ ಗಾಯಗೊಂಡಿದ್ದು, ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಅವರನ್ನು ಮಣಿಪಾಲಿನ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲಾಯಿತು. ಆದರೆ ದಾರಿ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿರುತ್ತದೆ.
ಅಂತ್ಯಕ್ರಿಯೆ:
ಮೃತರ ಅಂತ್ಯಕ್ರಿಯೆಯು ನಾಳೆ (ಡಿಸೆಂಬರ್ 27) ಸಂಜೆ 4:00 ಗಂಟೆಗೆ ಮುದರಂಗಡಿಯ ಚರ್ಚ್ನಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ನಮ್ಮ ವರದಿಗಾರರು

ವಿಲ್ಸನ್ ಡಿಸೋಜ
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now