
ಮುಂಬಯಿ (ಆರ್ಬಿಐ), ಎ.21: ರಂಗ ಸ್ವರೂಪ (ರಿ.) ಇದರ 20ನೇ ವರ್ಷದ 4ದಿನಗಳ ಮಕ್ಕಳ ಬೇಸಿಗೆ ಶಿಬಿರ ಸಮಾರೋಪ ಹಾಗೂ ರಂಗಸ್ವರೂಪ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮರಕಡ ಕುಂಜತ್ತಬೈಲ್ ಸರ್ಕಾರಿ ಶಾಲೆಯಲ್ಲಿ ನಡೆಯಿತು.
ದ.ಕ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಗೋವಿಂದ ಮಡಿವಾಳ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ಈಗಿನ ಕಾಲದಲ್ಲಿ ಪುಟಾಣಿ ಮಕ್ಕಳಿಗೆ ಬೋಧನೆ ಮಾಡುವುದು ಒಂದು ಚಾಲೆಂಜ್ ಅಗಿದೆ. ದ.ಕ ಜಿಲ್ಲೆಯಲ್ಲಿ 1772 ಶಾಲೆಗಳಿವೆ. ರಂಗ ಸ್ವರೂಪ ಸಂಸ್ಥೆಯೊಂದಿಗೆ ಕೈಜೋಡಿಸಿ ಮರಕಡ ಶಾಲೆ ಆಯೋಜಿಸಿದ ಬೇಸಿಗೆ ಶಿಬಿರ ಇತರ ಶಾಲೆಗಳೆ ಮಾದರಿಯಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಾನಪದ ವಿದ್ವಾಂಸ, ರಾಜ್ಯ ಪ್ರಶಸ್ತಿ ಪುರಸ್ಕೃತನಿವೃತ್ತ ಶಿಕ್ಷಕ ಕೆ.ಕೆ ಪೇಜಾವರ್ ರವರಿಗೆ ರಂಗಸ್ವರೂಪ-2025 ಪ್ರಶಸ್ತಿ ಪ್ರದಾನ ಮಾಡಲಾಯಿತು.
ಬಳಿಕ ಮಾತನಾಡಿದ ಅವರು ಈ ಶಿಬಿರ ನಿತ್ಯ ಶಿಬಿರವಾಗಬೇಕು ಮಕ್ಕಳು ನಿತ್ಯ ಸಂಭ್ರಮಿಸಬೇಕು ನಿತ್ಯ ಸಂಭ್ರಮಿಸಿದಾಗ ಶಿಕ್ಷಣಕ್ಕೆ ಹೆಚ್ಚು ಒತ್ತು ಬರುತ್ತಾದೆ ಎಂದು ಹೇಳಿದರು.
ರಂಗ ಸ್ವರೂಪ ಗೌರವ ಸಲಹೆಗಾರ ಎನ್. ಶಿವಪ್ರಕಾಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ರಂಗ ಸ್ವರೂಪ ಅಧ್ಯಕ್ಷ ರೆಹಮಾನ್ ಖಾನ್ ಕುಂಜತ್ತಬೈಲ್ ಪ್ರಸ್ತಾವಿಕ ಮಾತುಗಳನ್ನಾಡಿದರು.
ಮನಪಾ ಮಾಜಿ ಸದಸ್ಯ ಶರತ್ ಕುಮಾರ್, ಮರಕಡ ಸರಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಎ.ನೇತ್ರಾವತಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.
ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಕಾಸರಗೋಡು ರವರನ್ನು ಸನ್ಮಾನಿಸಲಾಯಿತು. ಶಿಬಿರ ನಿರ್ದೇಶಕ ಝುಬೇರ್ ಖಾನ್ ಕುಡ್ಲ ಸ್ವಾಗತಿಸಿದರು, ಸದಸ್ಯರಾದ ತಸ್ಲೀಮಾ ಬಾನು,ಅನೀಸಾ ಸವಾದ್ ಪ್ರಶಸ್ತಿ ಪತ್ರ ವಾಚಿಸಿದರು, ಗೌರವಾಧ್ಯಕ್ಷ ಪ್ರೇಂನಾಥ್ ಮರ್ಣೆ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಕಾಸರಗೋಡು ವಂದಿಸಿದರು. ಶಿಬಿರಾರ್ಥಿಗಳಿಂದ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ನಡೆಯಿತು.





Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now























