ನೆಲ್ಯಾಡಿ: ಚಾಕು ಇರಿದು ಯುವಕನ ಹತ್ಯೆ..!

ನೆಲ್ಯಾಡಿ: ಚಾಕು ಇರಿದು ಯುವಕನ ಹತ್ಯೆ..!

0Shares

ಪುತ್ತೂರು: ಚಾಕುವಿನಿಂದ ಇರಿದು ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಶುಕ್ರವಾರ ರಾತ್ರಿ ನೆಲ್ಯಾಡಿ ಹೊರ ಠಾಣಾ ವ್ಯಾಪ್ತಿಯ ಮಾದೇರಿ ಸಮೀಪ ನಡೆದಿದೆ.

ಮನೆಯ ಅಂಗಳದಲ್ಲೇ ಚಾಕುವಿನಿಂದ ಇರಿದು ಕೊಲೆಗೈಯಲಾಗಿದ್ದು ಮೃತ ಯುವಕನನ್ನು ಮಾದೇರಿ ನಿವಾಸಿ ಶರತ್ ಎಂದು ಗುರುತಿಸಲಾಗಿದೆ.

ಕೌಟುಂಬಿಕ ಕಲಹ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now