ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ನಿಧನ

ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ನಿಧನ
0Shares

ಹೊಸದಿಲ್ಲಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ

ಜೈಲು ಶಿಕ್ಷೆ ಅನುಭವಿಸುತ್ತಿದ್ದ ಮಾಜಿ ಕಾಂಗ್ರೆಸ್‌ ಸಂಸದ ಸಜ್ಜನ್‌ ಕುಮಾರ್‌ (Sajjan Kumar) ಅವರು ಅಸುನೀಗಿದ್ದಾರೆ. 80 ವರ್ಷದ ಅವರು ದೆಹಲಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ತಿಹಾ‌ರ್ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್ ಅವರನ್ನು ಸಮ್ಹರ್ಜಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು, ಅಲ್ಲಿ ವೈದ್ಯರು ಅವರನ್ನು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಅವರ ಸಾವಿಗೆ ಕಾರಣವನ್ನು ಆಸ್ಪತ್ರೆ ಇನ್ನೂ ಸ್ಪಷ್ಟಪಡಿಸಿಲ್ಲ.

ಔಟರ್‌ ದೆಹಲಿ ಮತ ಕ್ಷೇತ್ರದಿಂದ ಮೂರು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದರು. ಸಜ್ಜನ್ ಕುಮಾರ್ ಅವರು ಕಾಂಗ್ರೆಸ್‌ನ ಪ್ರಮುಖ ನಾಯಕರಾಗಿದ್ದರು. 2018 ರಲ್ಲಿ ಶಿಕ್ಷೆಗೊಳಗಾದ ನಂತರ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದರು.

ಅಕ್ಟೋಬರ್ 31, 1984 ರಂದು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಅವರ ಸಿಖ್ ಅಂಗರಕ್ಷಕರಾದ ಸತ್ವಂತ್ ಸಿಂಗ್‌ ಮತ್ತು ಬಿಯಾಂತ್ ಸಿಂಗ್ ಹತ್ಯೆ ಮಾಡಿದ ನಂತರ ಗಲಭೆಗಳು ಭುಗಿಲೆದ್ದವು. ಸಶಸ್ತ್ರ ಪುರುಷರ ಗುಂಪುಗಳು ದೆಹಲಿಯಾದ್ಯಂತ ಸಿಬ್ಬರನ್ನು ಗುರಿಯಾಗಿಸಿಕೊಂಡು ಅವರ ಮನೆಗಳು ಮತ್ತು ಅಂಗಡಿಗಳ ಮೇಲೆ ದಾಳಿ ಮಾಡಿದವು.

ಭಾರತದಾದ್ಯಂತ 3,000 ಕ್ಕೂ ಹೆಚ್ಚು ಸಿಬ್ಬರು ಕೊಲ್ಲಲ್ಪಟ್ಟಿದ್ದರು.

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮೂರು ದಶಕಗಳಿಗೂ ಹೆಚ್ಚು ಕಾಲ ಸಜ್ಜನ್ ಕುಮಾರ್ ಹಲವಾರು ಕ್ರಿಮಿನಲ್‌ ಪ್ರಕರಣಗಳನ್ನು ಎದುರಿಸಿದರು. ಡಿಸೆಂಬರ್ 17, 2018 ರಂದು, ದೆಹಲಿ ಹೈಕೋರ್ಟ್ ವಿಚಾರಣಾ ನ್ಯಾಯಾಲಯವು ಕುಮಾರ್‌ ಅವರನ್ನು ಪ್ರಕರಣದಲ್ಲಿ ಖುಲಾಸೆಗೊಳಿಸಿದ 2013 ರ ತೀರ್ಪನ್ನು ರದ್ದುಗೊಳಿಸಿತು. ನಂತರ ಅವರನ್ನು ತಪ್ಪಿತಸ್ಥರೆಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಲಾಯಿತು.

ರಾಜ್ ನಗರ ಭಾಗ-I, ಪಾಲಂ ಕಾಲೋನಿಯಲ್ಲಿ ನಡೆದ ಐದು ಸಿಖ್ ಪುರುಷರ ಹತ್ಯೆ ಮತ್ತು ವ್ಯಾಪಕ ಹಿಂಸಾಚಾರದ ಸಮಯದಲ್ಲಿ ಗುರುದ್ವಾರವನ್ನು ಸುಟ್ಟುಹಾಕಿದ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಜ್ಜನ್ ಕುಮಾ‌ರ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಕುಮಾರ್ ಅವರನ್ನು ಕ್ರಿಮಿನಲ್‌ ಪಿತೂರಿ ಮತ್ತು ಪ್ರಚೋದನೆಯ ಆರೋಪದಲ್ಲಿ ತಪ್ಪಿತಸ್ಥರೆಂದು ಹೈಕೋರ್ಟ್ ತೀರ್ಪು ನೀಡಿತು. ಅವರ ಜೀವನಾವಧಿಯನ್ನು ಜೈಲಿನಲ್ಲಿಯೇ ಇರಬೇಕೆಂದು ನಿರ್ದೇಶಿಸಿತು. ನ್ಯಾಯಾಲಯವು ತನ್ನ ತೀರ್ಪಿನಲ್ಲಿ, 1984 ರ ಸಿಖ್ ವಿರೋಧಿ ಹಿಂಸಾಚಾರವನ್ನು “ಮಾನವೀಯತೆಯ ವಿರುದ್ಧದ ಅಪರಾಧಗಳು” ಎಂದು ಬಣ್ಣಿಸಿತ್ತು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now