
ಪುತ್ತೂರು, ನ. 4 : ಕಾರಣಿಕ ಶಕ್ತಿಗಳಾದ ಕೋಟಿ- ಚೆನ್ನಯ, ದೇಯಿಬೈದೇತಿ ಮೂಲಸ್ಥಾನ ಗೆಜ್ಜೆಗಿರಿ ನಂದನಬಿತ್ತಿಲು ನಿವಾಸಿ ನಾಟಿವೈದ್ಯೆ ಲೀಲಾವತಿ ಬೈದೇತಿ (77) ಅವರು ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪಡುಮಲೆಯಲ್ಲಿನ ಪ್ರತಿ ಮರ-ಗಿಡ-ಬಳ್ಳಿಗಳಲ್ಲಿ ಸಂಜೀವಿನಿಯಂತಹ ಔಷಧೀಯ ದೃವ್ಯಗುಣಗಳಿವೆ ಎಂಬ ನಂಬಿಕೆ ಇದೆ. ಈ ಪರಿಸರದ ಲೀಲಾವತಿ ನಾಟಿ ವೈದ್ಯರಾಗಿ ಚಿರಪರಿಚಿತರು.
ಸಾವಿರಾರು ಮಂದಿಯ ಬದುಕಿನಲ್ಲಿ ಅಶಾ ಕಿರಣ ಮೂಡಿಸಿರುವುದರೊಂದಿಗೆ ನಾಟಿ ವೈದ್ಯವನ್ನು ಸೇವಾ ಯಜ್ಞದಂತೆ ನಡೆಸಿಕೊಂಡು ಬರುತ್ತಿದ್ದಾರೆ. ಮುಖ್ಯವಾಗಿ ಸರ್ಪಸುತ್ತು, ಕೆಂಪು, ದೃಷ್ಟಿ, ಬೆಸುರುಪು, ಸೊರಿಯಾಸಿಸ್-ಚರ್ಮ ರೋಗವನ್ನೂ ಪರಿಹರಿಸುವ ಚಿಕಿತ್ಸೆ ನೀಡುವಲ್ಲಿ ಪ್ರಖ್ಯಾತರು.
ಮಕ್ಕಳ ಚಿಕಿತ್ಸೆ, ಸಂಧಿವಾತ, ನೋವಿನ ತೈಲ ಅಲ್ಲದೆ ಇವರು ತಯಾರಿಸಿ ಕೊಡುವ ದೇಸೀ ಔಷಧಗಳಿಗೆ ಮತ್ತು ಕೇಶಕಾಂತಿ ತೈಲ, ದೇಯಿ- ಬೈದೈತಿ ತೈಲಕ್ಕೆ ಹಲವಾರು ರಾಜ್ಯದಿಂದ ಬೇಡಿಕೆಗಳಿವೆ.
2016 ರಲ್ಲಿ ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ನಡೆದ ಮಹಿಳಾ ಸಮಾಗಮ ಸಂದರ್ಭದಲಿ ಸಮ್ಮಾನ ಪುರಸ್ಕಾರ ಸಂದಿದೆ. ಕೋಟಿ-ಚೆನ್ನಯ, ದೇಯಿ ಬೈದೇತಿ ಮೂಲಸ್ಥಾನ ಗೆಜ್ಜೆಗಿರಿಯಯ ನಂದನಬಿತ್ತಿಲಿನಲ್ಲಿ ನಾಟಿ ವೈದ್ಯ ಪದ್ಧತಿಯನ್ನು ಮುಂದುವರಿಸಿಕೊಂಡು ಬಂದಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now
























