
ಪಟ್ಟೆ ಬಡಗನ್ನೂರು: ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಇದರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಇಲ್ಲಿಗೆ ನೂತನವಾಗಿ ಶಾಲಾ ವಾಹನಗಳನ್ನು ಖರೀದಿಸಲಾಯಿತು.
ಸುಮಾರು ಮುನ್ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದು ಕಾಲ್ನಡಿಗೆ ಅಥವಾ ಸಾರ್ವಜನಿಕ ರಸ್ತೆ ಸಾರಿಗೆ ವ್ಯವಸ್ಥೆಯ ಮೇಲೆ ಅವಲಂಬಿತರಾಗಿದ್ದರು. ಇದರಿಂದ ಸಮಯಕ್ಕೆ ಸರಿಯಾಗಿ, ಸುರಕ್ಷಿತವಾಗಿ ಶಾಲೆ ತಲುಪಲು ಕಷ್ಟಸಾಧ್ಯವಾಗುತ್ತಿತ್ತು. ಗ್ರಾಮೀಣ ಪ್ರದೇಶವಾದುದರಿಂದ ಈ ವಿದ್ಯಾಸಂಸ್ಥೆಗೆ ಶಾಲಾ ವಾಹನವು ಅತ್ಯಂತ ಅವಶ್ಯಕವಾಗಿದ್ದು, ಸುತ್ತಮುತ್ತಲಿನ ವಿದ್ಯಾರ್ಥಿಗಳಿಗೆ ಇದರಿಂದ ಬಹಳಷ್ಟು ಅನುಕೂಲವಾಗಲಿದೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now























