
ಪುತ್ತೂರು; ಆ. 01 ಮತ್ತು 02 ರಂದು ಮೂಡಬಿದ್ರೆಯ ಆಳ್ವಾಸ್ನಲ್ಲಿ ನಡೆಯಲಿರುವ ಬೃಹತ್ ಉದ್ಯೋಗ ಮೇಳದಲ್ಲಿ ಉದ್ಯೋಗ ಆಕಾಂಕ್ಷಿಗಳು ಭಾಗವಹಿಸುವ ಮೂಲಕ ಉದ್ಯೋಗಪಡೆದುಕೊಳ್ಳಬೇಕು, ಯಾರೂ ಈ ಅವಕಾಶದಿಂದ ವಂಚಿತರಾಗಬಾರದು ಅದಕ್ಕಾಗಿಯೇ ರೈ ಚಾರಿಟೇಬಲ್ ಟ್ರಸ್ಟ್ ಮೂಲಕ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.
ಅವರು ಶಾಸಕರ ಭವನದ ಸಭಾಂಗಣದಲ್ಲಿ ನಡೆದ ಉದ್ಯೋಗ ಮೇಳದ ಬಗ್ಗೆ ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಮೂಲಕ ಹಮ್ಮಿಕೊಂಡ ಕಾರ್ಯಾಗಾರದಲ್ಲಿ ಮಾತನಾಡಿದರು.
ಕಳೆದ ಬಾರಿಯೂ ಪುತ್ತೂರಿನಿಂದ ನೂರಾರು ವಿದ್ಯಾರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದರು, ಈ ಬಾರಿಯೂ ಉದ್ಯೋಗ ಆಕಾಂಕ್ಷಿಗಳು ಭಾಗವಹಿಸುವಂತೆ ಎಲ್ಲಾ ವ್ಯಸವೆಗಳನ್ನು ಮಾಡಲಾಗುವುದು, ಈಗಾಗಲೇ ನೋಂದಣಿ ಪ್ರಕ್ರಿಯೆ ಪ್ರಾರಂಭಗೊಂಡಿದ್ದು ಪುತ್ತೂರು ಆಸುಪಾಸಿನ ಎಲ್ಲಾ ವಿದ್ಯಾವಂತ ನಿರುದ್ಯೋಗಿಗಳು ಭಾಗವಹಿಸುವಂತೆ ಶಾಸಕರು ವಿನಂತಿಸಿದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now
























