
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಣಜಿ ಟೂರ್ನಿ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಕರ್ನಾಟಕ ತಂಡ ಅಮೋಘ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ ಬೌಲಿಂಗ್ ಆಯ್ದುಕೊಂಡಿದ್ದರು. ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ವೇಗದ ದಾಳಿ ಸಂಘಟಿಸಿದ ವಾಸುಕಿ ಕೌಶಿಕ್ 4 ವಿಕೆಟ್ ಪಡೆದರೆ, ಅಭಿಲಾಷ್ ಶೆಟ್ಟಿ 3 ವಿಕೆಟ್ ಕಬಳಿಸಿದರು. ಪರಿಣಾಮ ಪಂಜಾಬ್ ತಂಡವು ಮೊದಲ ಇನಿಂಗ್ಸ್ನಲ್ಲಿ ಕೇವಲ 55 ರನ್ಗಳಿಗೆ ಆಲೌಟ್ ಆಯಿತು.
ಶುಭ್ಮನ್ ಗಿಲ್ ನಾಯಕತ್ವದ ಪಂಜಾಬ್ ತಂಡದ ವಿರುದ್ಧ ಮಯಾಂಕ್ ಅಗರ್ವಾಲ್ ಮುಂದಾಳತ್ವದ ಕರ್ನಾಟಕ ತಂಡವು ಇನಿಂಗ್ಸ್ ಮತ್ತು 207 ರನ್ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಪ್ರಥಮ ಇನಿಂಗ್ಸ್ನಲ್ಲಿ ಕರ್ನಾಟಕ ತಂಡವು 475 ರನ್ಗಳ ಬೃಹತ್ ಮೊತ್ತ ಪೇರಿಸಿದ್ದರಿಂದ ದ್ವಿತೀಯ ಇನಿಂಗ್ಸ್ನಲ್ಲಿ ಬ್ಯಾಟ್ ಮಾಡುವ ಅವಕಶ್ಯತೆಯೇ ಬರಲಿಲ್ಲ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now
























