
ರಾಯ್ಪುರ: ಛತ್ತೀಸ್ಗಢದ ಸಾಂಪ್ರದಾಯಿಕ ಪಾಂಡವಾನಿ ಜಾನಪದ ಕಥನಕಲೆಯನ್ನು ಜಾಗತಿಕ ಮಟ್ಟಕ್ಕೆ ಪರಿಚಯಿಸಿದ್ದ ಖ್ಯಾತ ಜಾನಪದ ಗಾಯಕಿ ತೀಜನ ಬಾಯಿ ಅವರು ದೀರ್ಘಕಾಲದ ಅನಾರೋಗ್ಯದ ಬಳಿಕ ಇಂದು ಭಾನುವಾರ ಬೆಳಗ್ಗೆ ರಾಯ್ಪುರದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು.
ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತರಾದ ತೀಜನ ಬಾಯಿ ಅವರು ಮೇ 27ರಿಂದ ಎಐಐಎಂಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಭಾನುವಾರ ನಸುಕಿನ ಜಾವ 3.15ಕ್ಕೆ ಕೊನೆಯುಸಿರೆಳೆದರು ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ತೀಜನ ಬಾಯಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ತಮ್ಮ ಅದ್ಭುತ ಪ್ರದರ್ಶನಗಳ ಮೂಲಕ ಛತ್ತೀಸ್ಗಢದ ಜಾನಪದ ಕಲೆಗೆ ವಿಶಿಷ್ಟ ಜಾಗತಿಕ ಗುರುತನ್ನು ತಂದುಕೊಟ್ಟ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಹೇಳಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now