ಕರಾವಳಿಯ ಜಾನಪದ ಅಧ್ಯಯನಕ್ಕೆ ಶಿವರಾಮ ಕಾರಂತರ ಕೊಡುಗೆ ಅಪಾರ : ಎಸ್ ಎ ಕೃಷ್ಣಯ್ಯ

ಕರಾವಳಿಯ ಜಾನಪದ ಅಧ್ಯಯನಕ್ಕೆ ಶಿವರಾಮ ಕಾರಂತರ ಕೊಡುಗೆ ಅಪಾರ : ಎಸ್ ಎ ಕೃಷ್ಣಯ್ಯ

0Shares

ಉಡುಪಿ, ಮೇ 16 : ಕರಾವಳಿಯ ಜಾನಪದವನ್ನು ಕೇಂದ್ರವಾಗಿಟ್ಟುಕೊಂಡು ಡಾ. ಶಿವರಾಮ ಕಾರಂತರು ಸಾಹಿತ್ಯ ರಚನೆ ಮಾಡಿದ್ದಾರೆ. ಈ ದೃಷ್ಟಿಯಿಂದ ಕಾರಂತರ ಸಾಹಿತ್ಯದ ಅಧ್ಯಯನವೆಂದರೆ ಕರಾವಳಿಯ ಜಾನಪದ ಅಧ್ಯಯನವು ಆಗುತ್ತಿದೆ ಎಂದು ಖ್ಯಾತ ಜಾನಪದ ಸಂಶೋಧಕ ಪ್ರೊ. ಎಸ್.ಎ. ಕೃಷ್ಣಯ್ಯ ಹೇಳಿದರು.

ಅವರು ಇಂದು ನಗರದ ಬ್ರಹ್ಮಗಿರಿಯ ರೆಡ್ಕ್ರಾಸ್ ಭವನದ ಹೆನ್ರಿ ಡ್ಯುನಾಂಟ್ ಸಭಾಭವನದಲ್ಲಿ ಕೋಟ ಶಿವರಾಮ ಕಾರಂತ ಟ್ರಸ್ಟ್ ಹಾಗೂ ಡಾ. ಜಿ ಶಂಕರ್ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತ್ತಕೋತ್ತರ ಅಧ್ಯಯನ ಕೇಂದ್ರ, ಅಜ್ಜರಕಾಡು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಡಾ. ಶಿವರಾಮ ಕಾರಂತರ ಬರಹ ಮತ್ತು ಜಾನಪದ ಅಧ್ಯಯನ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಡಾ. ಶಿವರಾಮ ಕಾರಂತ ಟ್ರಸ್ಟ್ನ ಅಧ್ಯಕ್ಷ ಡಾ. ಗಣನಾಥ ಶೆಟ್ಟಿ ಎಕ್ಕಾರು ಮಾತನಾಡಿ, ಡಾ. ಶಿವರಾಮ ಕಾರಂತರು ಸಾಹಿತ್ಯ ಮಾತ್ರವಲ್ಲದೇ, ಪರಿಸರದ ಬಗೆಗೆ ಅವರ ಹೋರಾಟ ಮಹತ್ತರವಾಗಿದೆ. ದಿಟ್ಟತನ, ಸ್ಪಷ್ಟ ನೇರ ಮಾತು ಅವರಲ್ಲಿ ಕಾಣುತ್ತಿದ್ದು, ವಿಶ್ವದಲ್ಲೇ ಕರಾವಳಿಯ ಹೆಸರನ್ನು ಸಾಹಿತ್ಯದಲ್ಲಿ ಮುಂಚೂಣಿಯಲ್ಲಿ ಇರಿಸುವಲ್ಲಿ ಕಾರಂತರ ಪಾತ್ರ ಪ್ರಮುಖವಾಗಿದೆ.

t

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now