ರೆಡ್ಕ್ರಾಸಿನ ಶಿಬಿರಗಳು ವ್ಯಕ್ತಿತ್ವ ವಿಕಸನಕ್ಕೆ ಪೂರಕ : ಬಸ್ರೂರು ರಾಜೀವ ಶೆಟ್ಟಿ

ರೆಡ್ಕ್ರಾಸಿನ ಶಿಬಿರಗಳು ವ್ಯಕ್ತಿತ್ವ ವಿಕಸನಕ್ಕೆ ಪೂರಕ : ಬಸ್ರೂರು ರಾಜೀವ ಶೆಟ್ಟಿ

0Shares

ಉಡುಪಿ, ಮೇ 27 : ಶಿಕ್ಷಣದ ಉದ್ದೇಶ ಕೇವಲ ಜ್ಞಾನಾರ್ಜನೆ ಮಾತ್ರ ಅಲ್ಲ. ಅದು ವ್ಯಕ್ತಿಯ ಶಕ್ತಿಯನ್ನು ಹೊರತೆಗೆದು ವ್ಯಕ್ತಿತ್ವವನ್ನು ರೂಪಿಸಬೇಕು. ಇದರಲ್ಲಿ ಪಠ್ಯ ಪೂರಕ ಚಟುವಟಿಕೆಗಳು ಮಹತ್ವದ ಪಾತ್ರ ವಹಿಸುತ್ತವೆ. ರೆಡ್ಕ್ರಾಸಿನ ಶಿಬಿರಗಳು ವ್ಯಕ್ತಿತ್ವ ಬೆಳವಣಿಗೆಗೆ ಪೂರಕವಾಗಿದೆ ಎಂದು ರಾಜ್ಯ ರೆಡ್ಕ್ರಾಸ್ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಹೇಳಿದರು.

ಅವರು ಶನಿವಾರ ನಗರದ ರೆಡ್ಕ್ರಾಸ್ ಭವನದಲ್ಲಿ ಕಾರ್ಕಳದ ಮಂಜುನಾಥ ಪೈ ಸ್ಮಾರಕ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಮೂರು ದಿನಗಳ ವ್ಯಕ್ತಿತ್ವ ವಿಕಸನ ಶಿಬಿರವನ್ನು ಉದ್ಘಾಟಿಸಿ ಮಾತಾನಾಡಿದರು.

ಜಿಲ್ಲಾ ರೆಡ್ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಶಿಬಿರವು ವಿದ್ಯಾರ್ಥಿಗಳಿಗೆ ಕೌಶಲ್ಯದ ತರಬೇತಿಯನ್ನು ನೀಡುತ್ತದೆ ಎಂದರು.

ರೆಡ್ಕ್ರಾಸ್ ಖಜಾಂಚಿ ರಮಾದೇವಿ, ವಿಕಲಚೇತನರ ಪುನರ್ವಸತಿ ಕೇಂದ್ರದ ಅಡಿಯಾಲಜಿಸ್ಟ್ ನೆಲಿಶಾ ಮೆರಿಲ್ ಜತ್ತನ್ನ, ಕಾಲೇಜಿನ ರೆಡ್ಕ್ರಾಸ್ ಘಟಕದ ನಾಯಕಿ ನವ್ಯಾ ಹೆಗ್ಡೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಕಾಲೇಜಿನ ರೆಡ್ಕ್ರಾಸ್ ಸಂಯೋಜಕಿ ಡಾ. ವಿದ್ಯಾ ಪ್ರಭು ಪ್ರಸ್ತಾವನೆಯೊಂದಿಗೆ ಸ್ವಾಗತಿಸಿ, ಸ್ನೇಹ ಕಾರ್ಯಕ್ರಮ ನಿರ್ವಹಿಸಿ, ದಿವ್ಯಾ ದೇವಾಡಿಗ ವಂದಿಸಿದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now