
ಉಡುಪಿ ಜು. 10: ಕಲ್ಯಾಣಪುರ ಮೀನು ಮಾರುಕಟ್ಟೆ ಬಳಿ ಕಳೆದ ಮೂರು ನಾಲ್ಕು ದಿನಗಳಿಂದ ಮಳೆಗಾಳಿಗೆ ಅಸಹಾಯಕರಾಗಿದ್ದ ವೃದ್ಧರನ್ನು ವಿಶು ಶೆಟ್ಟಿ ಅಂಬಲಪಾಡಿ ರಕ್ಷಿಸಿ ಕೊಳಲಗಿರಿಯ ಸ್ವರ್ಗ ಆಶ್ರಮಕ್ಕೆ ದಾಖಲಿಸಿದ್ದಾರೆ. ವೃದ್ಧರು ತನ್ನ ಹೆಸರು ಲಕ್ಷ್ಮಣ ಪೂಜಾರಿ ಮಕ್ಕಳು ಬರುತ್ತಾರೆ ಎಂದು ಕಾಯುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ. ಮೇಲ್ನೋಟಕ್ಕೆ ಮರೆವು ಕಾಯಿಲೆಯಂತೆ ಕಾಣುತ್ತಾರೆ. ಈ ಬಗ್ಗೆ ಮೀನು ಮಾರಾಟ ಮಾಡುವ ಮಹಿಳೆಯೋರ್ವರಿಂದ ಮಾಹಿತಿ ಪಡೆದ ವಿಶು ಶೆಟ್ಟಿಯವರು, ರಕ್ಷಿಸಿ ಆಶ್ರಮಕ್ಕೆ ದಾಖಲಿಸಿದ್ದಾರೆ.
ಸಂಬಂಧಿಕರು ಯಾರಾದರೂ ಇದ್ದಲ್ಲಿ ಸ್ವರ್ಗ ಆಶ್ರಮ ಕೊಳಲಗಿರಿ ಸಂಪರ್ಕಿಸುವಂತೆ ವಿಶು ಶೆಟ್ಟಿ ವಿನಂತಿಸಿದ್ದಾರೆ. ನಗರ ಠಾಣೆಗೆ ಮಾಹಿತಿ ನೀಡಲಾಗಿದೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now
























