
ಉಡುಪಿ : ಜಿಲ್ಲಾ ರೆಡ್ಕ್ರಾಸ್ ಘಟಕದ ಶಿಫಾರಸಿನಂತೆ ಕುಂದಾಪುರ ರೆಡ್ಕ್ರಾಸ್ ಘಟಕವು ಇಪ್ಪತ್ತೈದು ಸಾವಿರ ರೂಪಾಯಿಗಳ ಔಷಧಿಗಳನ್ನು ಬಡರೋಗಿಗಳಿಗೆ ವಿತರಣೆ ಮಾಡುವ ಸಲುವಾಗಿ ನಗರ ಆರೋಗ್ಯ ಕುಟುಂಬ ಕಲ್ಯಾಣ ಕೇಂದ್ರ ಉಡುಪಿ ಜಿಲ್ಲೆಗೆ ನೀಡಲಾಯಿತು. ಭಾರತೀಯ ಕುಟುಂಬ ಕಲ್ಯಾಣ ಕೇಂದ್ರದ ಅವಿಭಾಜಿತ ಜಿಲ್ಲಾ ಘಟಕದ ಅಧ್ಯಕ್ಷರಾದ ಭಾಸ್ಕರ್ ಶೆಟ್ಟಿಯವರಿಗೆ ಕುಂದಾಪುರ ರೆಡ್ಕ್ರಾಸ್ ಸಭಾಪತಿಗಳಾದ ಜಯಕರ ಶೆಟ್ಟಿಯವರು ರೆಡ್ಕ್ರಾಸ್ ಭವನದಲ್ಲಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ರೆಡ್ಕ್ರಾಸ್ ಖಜಾಂಚಿ ರಮಾದೇವಿ ತಾಲುಕು ರೆಡ್ಕ್ರಾಸ್ ಖಚಾಂಚಿ ಶಿವರಾಮ ಶೆಟ್ಟಿ ಕಾರ್ಯದರ್ಶಿ ಸತ್ಯನಾರಾಯಣ ಪುರಾಣಿಕ್ ನಗರ ಆರೋಗ್ಯ ಕುಟುಂಬ ಕಲ್ಯಾಣ ಕೇಂದ್ರದ ವೈದ್ಯಾಧಿಕಾರಿ ಡಾ. ಮೇಘ ಉಪಸ್ಥಿತರಿದ್ದರು. ಉಡುಪಿ ಜಿಲ್ಲಾ ರೆಡ್ಕ್ರಾಸ್ ವತಿಯಿಂದ ಫಲಾನುಭವಿಗಳಿಗೆ ವಿತರಿಸುವುದಕ್ಕಾಗಿ ಸೊಳ್ಳೆ ಪರದೆ ಕಾಯಿಲ್ ಮತ್ತು ಟರ್ಪಲಿನ್ಗಳನ್ನು ವಿತರಿಸಲಾಗಿದೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now
























