
ಉಡುಪಿಯ ಚಿತ್ರಕಲಾ ಮಂದಿರ ಕಲಾಶಾಲೆಯಲ್ಲಿ ಚಿತ್ರಕಲೆಯ ಬಗೆಗಿನ ಕಲಾ ಪದವಿಯನ್ನು ೨೦೦೨-೨೦೦೭ರ ಸಾಲಿನಲ್ಲಿ ಪೂರೈಸಿದ ಕಲಾವಿದರ ತಂಡವು ೧೮ ವರ್ಷಗಳ ನಂತರ ಮತ್ತೊಮ್ಮೆ ಜೊತೆ ಸೇರುತ್ತ ತಾವು ಕಲಿತ ಕಲಾಶಾಲೆಯಲ್ಲಿಯೇ ಸಮೂಹ ಪ್ರದರ್ಶನ ಹಾಗೂ ಗುರುವಂದನೆ ಕಾರ್ಯಕ್ರಮ ನಡೆಸಲು ಯೋಜಿಸಿದೆ.
ಗಣೇಶೋತ್ಸವದ ಶುಭ ಸಂದರ್ಭದಲ್ಲಿ ಈ ಕಲಾಪ್ರದರ್ಶನವು ಸಿಟಿ ಬಸ್ ನಿಲ್ದಾಣದ ಬಳಿಯಿರುವ ಕಲಾಶಾಲೆಯಲ್ಲಿನ ವಿಭೂತಿ ಆರ್ಟ್ ಗ್ಯಾಲರಿಯಲ್ಲಿ ದಿನಾಂಕ ೨೩ನೇ ಆಗಸ್ಟ್ ಶನಿವಾರದಂದು ಪೂರ್ವಾಹ್ನ ೧೦:೩೦ಕ್ಕೆ ಮಧುರಂ ವೈಟ್ ಲೋಟಸ್ನ ಆಡಳಿತ ನಿರ್ದೇಶಕರಾದ ಅಜಯ್ ಪಿ. ಶೆಟ್ಟಿಯವರಿಂದ ಉದ್ಘಾಟನೆಗೊಳ್ಳಲಿದೆ. ಮುಖ್ಯ ಅತಿಥಿಗಳಾಗಿ ಸ್ಮರಣಿಕಾ ಸಂಸ್ಥೆಯ ಸಂಸ್ಥಾಪಕರಾದ ದಿವಾಕರ್ ಸನಿಲ್ ಹಾಗೂ ಕಲಾಶಾಲೆಯ ನಿರ್ದೇಶಕರಾದ ಡಾ. ನಿರಂಜನ್ ಯು.ಸಿ.ಯವರು ಉಪಸ್ಥಿತರಿರುತ್ತಾರೆ.
ಇದೇ ಸಂದರ್ಭದಲ್ಲಿ ತಮಗೆ ಕಲಿಸಿದ ಗುರುಗಳಿಗೆ ಗುರುವಂದನೆ ಸಲ್ಲಿಸುವ ಸನ್ಮಾನ ಕಾರ್ಯಕ್ರಮವನ್ನೂ ಆಯೋಜಿಸಲಾಗಿದೆ. ಗುರುಗಳಾಗಿರುವ ಕಲಾಭೀಷ್ಮ ದಿ. ಕೆ. ಎಲ್. ಭಟ್ರವರ sಸಂಸ್ಮರಣೆ, ಕಲಾವಿದ ಗುರುಗಳಾದ ವಿಶ್ವೇಶ್ವರ ಪರ್ಕಳ, ಡಾ. ನಿರಂಜನ್ ಯು.ಸಿ., ಡಾ. ವಿಶ್ವನಾಥ ಎ.ಎಸ್., ಬಸವರಾಜ ಕುತ್ನಿ, ಸುಮಂಗಲಾ ಭಟ್, ಡಾ. ಭಾರತಿ ಮರವಂತೆ, ಮಹೇಶ್ ಉಮತಾರ್, ಗಣೇಶ್ ಮಂದಾರ, ಶಂಕರ್ ಹಂದಾಡಿ ಹಾಗೂ ಮುರಳಿ ಕೃಷ್ಣ ರಾವ್ರವರುಗಳು ಗುರುವಂದನೆ ಸ್ವೀಕರಿಸಲಿರುವರು.
ಕಲಾವಿದರಾದ ಅನ್ನಪೂರ್ಣ ಕಾಮತ್, ಡಾ. ಜನಾರ್ದನ ರಾವ್ ಹಾವಂಜೆ, ಕಾಂತಿ ನವೀನ್ ಪ್ರಭು, ಪ್ರಶಾಂತ್ ಕೋಟ, ಪ್ರವೀಣ್ ಮಲ್ಲಾರ್, ಪುರಂದರ್ ಎಸ್. ಆಚಾರ್ಯ, ರಾಘವೇಂದ್ರ ಆಚಾರ್ಯ, ರೂಪಶ್ರೀ ರಾವ್, ಶ್ರೀನಿವಾಸ್ ಆಚಾರ್ಯ, ಸುಜೇಂದ್ರ ಕಾರ್ಲ, ಸೂರಜ್ ಕುಮಾರ್, ವಿದ್ಯಾ ಎಲ್ಲೂರ್, ಯಶೋಧ ಎಸ್. ಸನಿಲ್ರವರು ರಚಿಸಿರುವ ಗಣೇಶ ಹಾಗೂ ಸಮಕಾಲೀನ ಶೈಲಿಯ ಸುಮಾರು ೨೫ರಷ್ಟು ಕಲಾಕೃತಿಗಳು ಕಲಾಪ್ರದರ್ಶನದಲ್ಲಿರಲಿದೆ. ಈ ಪ್ರದರ್ಶನವು ದಿನಾಂಕ ೨೩ರಿಂದ ಮೊದಲ್ಗೊಂಡು ೩೧ನೇ ಆಗಸ್ಟ್ ರವಿವಾರದ ತನಕ ಅಪರಾಹ್ನ ೨ರಿಂದ ೬ರವರೆಗೆ ಕಲಾಸಕ್ತರ ವೀಕ್ಷಣೆಗೆ ತೆರೆದಿರಲಿದೆ.
ಕಲಾಶಾಲೆಯಲ್ಲಿ ಕಲಿತ ದಿನಗಳ ಮೆಲುಕು ಹಾಕುತ್ತ, ಪೂರ್ಣ ಪ್ರಮಾಣದ ಕಲಾಕಾರರಾಗಿ ವಿವಿಧ ಮಾಧ್ಯಮಗಳಲ್ಲಿ, ವಿವಿಧ ಕಲಾ ಕ್ಷೇತ್ರಗಳಲ್ಲಿ ದುಡಿಯುತ್ತಿರುವ ಈ ಕಲಾವಿದರುಗಳು ಈ ಕಲಾಪ್ರದರ್ಶನದ ಅವಧಿಯ ನಡುವೆ ಸಂಜೆ ೪ಕ್ಕೆ ವಿವಿಧ ಕಾರ್ಯಕ್ರಮಗಳನ್ನೂ ಹಮ್ಮಿಕೊಂಡಿರುವರು. ೨೩ನೇ ಶನಿವಾರದಂದು ಕಾವಿಕಲೆಯ ಪುನರುಜ್ಜೀವನದ ಬಗೆಗಿನ ಡಾಕ್ಯುಮೆಂಟರಿ ಪ್ರದರ್ಶನ ಹಾಗೂ ಸಂವಾದವನ್ನು ಡಾ. ಜನಾರ್ದನ ರಾವ್ ಹಾವಂಜೆ, ೨೪ನೇ ಭಾನುವಾರ “ಕಾಣದ ಕಡಲು” ಕಿರುಚಿತ್ರ ಪ್ರದರ್ಶನ ಹಾಗೂ ಸಂವಾದವನ್ನು ಕಲಾವಿದೆ ಕಾಂತಿ ನಾಯಕ್, ೨೯ನೇ ಶುಕ್ರವಾರ “ಕಲೆ ಹಾಗೂ ಪ್ರಕೃತಿ” ನಿಸರ್ಗದ ಜೊತೆಗಿನ ಅನುಭವಗಳನ್ನು ಹವ್ಯಾಸಿ ಚಾರಣಿಗ ಸುಜೇಂದ್ರ ಕಾರ್ಲ ಹಾಗೂ ೩೧ನೇ ಭಾನುವಾರ ಸಂಜೆ ನಾಲ್ಕಕ್ಕೆ ಮಕ್ಕಳಿಗೆ ಉಪಯುಕ್ತವೆನಿಸುವ ಕರಕುಶಲ ಕಲೆಯ ನಿರ್ಮಾಣ ಪ್ರಕ್ರಿಯೆಯ ಪ್ರದರ್ಶನವನ್ನು ಯಶೋಧಾ ಎಸ್. ಸನಿಲ್ರವರುಗಳು ನಡೆಸಿಕೊಡಲಿದ್ದಾರೆ.
ವಂದನೆಗಳೊAದಿಗೆ
ಡಾ. ಜನಾರ್ದನ ಹಾವಂಜೆ (+೯೧೯೮೪೫೬೫೦೫೪೪)
ಸೂರಜ್ ಕುಮಾರ್ ( ೯೮೯೨೨೨೪೮೬೭)
ವಿದ್ಯಾ ಎಲ್ಲೂರ್
ಕಾಂತಿ ನವೀನ್ ಪ್ರಭು
ಪುರಂದರ ಆಚಾರ್ಯ
ಹಾಗೂ ಹಳೆ ವಿದ್ಯಾರ್ಥಿಗಳು

Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now