ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರಾಗಿ ಇಂದ್ರಾಳಿ ಜಯಕರ ಶೆಟ್ಟಿ ಆಯ್ಕೆ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರಾಗಿ ಇಂದ್ರಾಳಿ ಜಯಕರ ಶೆಟ್ಟಿ ಆಯ್ಕೆ

0Shares

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಹೆಚ್. ಪಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು 16ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ಉಡುಪಿಯ ರಾಜಾಂಗಣದ ಮಥುರಾ ಕಂಫರ್ಟ್ಸ್ ಸಭಾಂಗಣದಲ್ಲಿ ನೆರವೇರಿತು.

ಹಿರಿಯರು, ಸಾಹಿತ್ಯಾಭಿಮಾನಿಗಳು, ಸಾಹಿತಿಗಳು, ಕಲಾವಿದರು, ಭಾಗವಹಿಸಿದ್ದ ಈ ಸಭೆಯಲ್ಲಿ ಸಮ್ಮೇಳನದ ಸ್ವಾಗತ ಸಮಿತಿಯನ್ನು ಹಾಗೂ ವಿವಿಧ ಸಮಿತಿಗಳನ್ನು ರಚಿಸಲಾಯಿತು. ಮೇ 3ರಂದು ​ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ​ಹವಾನಿಯಂತ್ರಿತ ಸಭಾಂಗಣದಲ್ಲಿ​ ಅದ್ದೂರಿಯಾಗಿ ನಡೆಸಲಾಗುವುದು​. ಸಮ್ಮೇಳನ ಸರ್ವಾಧ್ಯಕ್ಷರಾಗಿ ಈಗಾಗಲೇ ಖ್ಯಾತ ವೈದ್ಯ , ಸಾಹಿತಿ, ಕಲಾವಿದ ಡಾ. ಭಾಸ್ಕರಾನಂದ ಕುಮಾರ್ ಇವರನ್ನು ಆಯ್ಕೆಮಾಡಲಾಗಿದೆ.

ಈ ಸಂದಭ೯ದಲ್ಲಿ ​ಉಡುಪಿ ವಿಶ್ವನಾಥ್ ಶೆಣೈ, ​ವಿಶ್ರಾಂತ ಬ್ಯಾಂಕ್ ಅಧಿಕಾರಿ ಸಿ .ಎಸ್ . ರಾವ್ , ತಾಲೂಕು ಗೌರವ ಕಾರ್ಯದರ್ಶಿಗಳಾದ ಜನಾರ್ದನ ಕೊಡವೂರು, ರಂಜಿನಿ ವಸಂತ್ ಕೋಶಾಧ್ಯಕ್ಷ ರಾಜೇಶ್ ಭಟ್ ಪಣಿಯಾಡಿ​ ​ಉಪಸ್ಥಿತರಿದ್ದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now