
ಉಡುಪಿ: ಉಡುಪಿ ಗುಂಡಿಬೈಲಿನ ಪೆಟ್ರೋಲ್ ಬಂಕ್ ಸಮೀಪ ಅಂಬಾಗಿಲು–ಕಲ್ಸಂಕ ಸಂಪರ್ಕ ಮುಖ್ಯ ರಸ್ತೆಯ ಮಧ್ಯಭಾಗದಲ್ಲಿ ಏಕಾಏಕಿ ಬೃಹತ್ ಕಂದಕವೊಂದು ಬಾಯ್ತೆರೆದಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಕಳಪೆ ಕಾಮಗಾರಿ ಆರೋಪ: ರಸ್ತೆ ನಿರ್ಮಾಣದಲ್ಲಿ ಮರಳು ಮಿಶ್ರಿತ ಕಳಪೆ ಗುಣಮಟ್ಟದ ವಸ್ತು ಬಳಸಿರುವುದರಿಂದ ರಸ್ತೆ ಕುಸಿದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈಗಾಗಲೇ ದಾರಿಯುದ್ದಕ್ಕೂ ಅಲ್ಲಲ್ಲಿ ರಸ್ತೆ ಮಧ್ಯೆ ಹೊಂಡಗಳು ನಿರ್ಮಾಣವಾಗಿದ್ದು, ಒಳಚರಂಡಿ ಕಾಮಗಾರಿಯಿಂದ ಸಂಚಾರಕ್ಕೂ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now