ನಗರ ಪ್ರಾಧಿಕಾರಗಳ ಒಕ್ಕೂಟದ ನಿಯೋಗದಿಂದ ಕೆಪಿಸಿಸಿ ಅಧ್ಯಕ್ಷ ಬಿ. ಕೆ. ಹರಿಪ್ರಸಾದ್ ಭೇಟಿ

ನಗರ ಪ್ರಾಧಿಕಾರಗಳ ಒಕ್ಕೂಟದ ನಿಯೋಗದಿಂದ ಕೆಪಿಸಿಸಿ ಅಧ್ಯಕ್ಷ ಬಿ. ಕೆ. ಹರಿಪ್ರಸಾದ್ ಭೇಟಿ
0Shares

ಉಡುಪಿ ಸೆಪ್ಟಂಬರ್ 09 :ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ನಗರಾಭಿವೃದ್ಧಿ ಮತ್ತು ನಗರ ಯೋಜನಾ ಪ್ರಾಧಿಕಾರಗಳ ಒಕ್ಕೂಟದ ಪದಾಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕರಾದ ಬಿ. ಕೆ. ಹರಿಪ್ರಸಾದ್ ರವರನ್ನು ಮಂಗಳೂರು ಸರ್ಕ್ಯುಟ್ ಹೌಸ್ ನಲ್ಲಿ ಭೇಟಿ ಮಾಡಿ, 9/11 ಸಮಸ್ಯೆ, ಕನ್ವರ್ಷನ್, ವಿನ್ಯಾಸ ನಕ್ಷೆ ಅನುಮೋದನೆ, ಕಟ್ಟಡ ಪರವಾನಿಗೆ ಮೊದಲಾದ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳಲು, ಕರಾವಳಿ ಜಿಲ್ಲೆಗಳಿಗೆ ಏಕ ರೂಪ ನಿಯಮವನ್ನು ಪಾಲಿಸಲು ಪ್ರತ್ಯೇಕ ವಲಯ ನಿಯಮಾವಳಿ ರಚಿಸಬೇಕು.

ಪ್ರಸ್ತುತ ಕರಾವಳಿ ಜಿಲ್ಲೆಗಳು ಮೈಸೂರು ವಿಭಾಗಕ್ಕೆ ಸೇರಿದ್ದು ಮಂಜೂರಾತಿ ವಿಳಂಬವಾಗುತ್ತಿದೆ. ಮಂಗಳೂರಿನಲ್ಲಿ ಜಂಟಿ ನಿರ್ದೇಶಕರ ಕಚೇರಿ ಸ್ಥಾಪಿಸಿ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಬೇಕೆಂದು ನಿಯೋಗ ಬೇಡಿಕೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಸಂಚಾಲಕ ಉಡುಪಿ ನಗರಾಭಿವೃದ್ಧಿ ಅಧ್ಯಕ್ಷ ದಿನಕರ್ ಹೇರೂರ್, ಒಕ್ಕೂಟದ ಸಂಚಾಲಕ ಸುಳ್ಯ ನಗರ ಯೋಜ ನ ಪ್ರಾಧಿಕಾರದ ಅಧ್ಯಕ್ಷ ಕೆ. ಎಂ. ಮುಸ್ತಫ ಸುಳ್ಯ, ಮೂಡಬಿದ್ರಿ ನಗರ ಯೋಜನಾ ಪ್ರಾಧಿಕಾರ ಸದಸ್ಯ ಶೇಖರ ಪೂಜಾರಿ, ಉಡುಪಿ ಪ್ರಾಧಿಕಾರ ಸದಸ್ಯರಾದ ಗಿರೀಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now